ಮಾಧುಸ್ವಾಮಿ ಕಾರು ಅಪಘಾತ

ಮಾಧುಸ್ವಾಮಿ ಕಾರು ಅಪಘಾತ

ಚಿಕ್ಕಮಗಳೂರು: ಮಾಜಿ ಸಚಿವ ಹಾಗೂ ಬಿಜೆಪಿ ಮುಖಂಡ ಜೆ.ಸಿ ಮಾಧುಸ್ವಾಮಿ ಅವರ ಕಾರು ಅಪಘಾತಕ್ಕೀಡಾಗಿರುವ ಘಟನೆ ಚಿಕ್ಕಮಗಳೂರು ಚಿಲ್ಲೆ ಕಡೂರು ತಾಲ್ಲೂಕಿನ ಹೇಮಗಿರಿ ಗೇಟ್ ಬಳಿ ನಡೆದಿದೆ. ಇಂದು ಮಾಜಿ ಸಚಿವ ಮಾಧುಸ್ವಾಮಿ ಅವರು ಬಿರೂರು ಬಳಿ ಹಾಸನ ಜೆಡಿಎಸ್-ಬಿಜೆಪಿ ಮೈತ್ರಿ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಕಾರ್ಯಕ್ರಮಕ್ಕೆ ತೆರಳುತ್ತಿದ್ದರು. ಈ ವೇಳೆ ಅವರಿದ್ದ ಕಾರು ಆಟೋವೊಂದಕ್ಕೆ ಢಿಕ್ಕಿಯಾಗಿದೆ.

ಗುಜುರಿ ಆಟೋಗೆ ಮಾಧುಸ್ವಾಮಿ ಅವರ ಕಾರು ಡಿಕ್ಕಿ ಹೊಡೆದಿದೆ. ಪರಿಣಾಮ ರಿಕ್ಷಾ ಚಲಾಯಿಸುತ್ತಿದ್ದ ಬಾಣಾವರದ ರಫೀಕ್ ಎಂಬವರು ಗಾಯಗೊಂಡಿದ್ದಾರೆ. ಸದ್ಯ ಅವರು ಕಡೂರು ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದುಬಂದಿದೆ. ಮಾಧುಸ್ವಾಮಿಯ ಕಾರಿನ ಮುಂಭಾಗಕ್ಕೆ ಸ್ವಲ್ಪ ಹಾನಿಯಾಗಿದೆ. ಅಪಘಾತ ಸಂಭವಿಸಿದ ಬಳಿಕ ಮಾಧುಸ್ವಾಮಿ ಅಲ್ಲಿಂದ ಬೇರೊಂದು ಕಾರಿನಲ್ಲಿ ತೆರಳಿದ್ದಾರೆ.

ಫ್ರೆಶ್ ನ್ಯೂಸ್

Latest Posts

Featured Videos