ವಿಷ್ಣುಸಮುದ್ರ ಕೆರೆಗೆ ಉರುಳಿ ಬಿದ್ದ ಕಾರು

ವಿಷ್ಣುಸಮುದ್ರ ಕೆರೆಗೆ ಉರುಳಿ ಬಿದ್ದ ಕಾರು

ಹಾಸನ, . 10, ನ್ಯೂಸ್ ಎಕ್ಸ್ ಪ್ರೆಸ್: ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಕೆರೆಗೆ ಉರುಳಿ ಬಿದ್ದ ಪರಿಣಾಮ ವೃದ್ಧೆ ಸ್ಥಳದಲ್ಲೇ ಸಾವನ್ನಪ್ಪಿ  ತಾಯಿ-ಮಗ ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೇಲೂರು ಸಮೀಪದ ವಿಷ್ಣು ಸಮುದ್ರ ಕೆರೆಯಲ್ಲಿ ನಡೆದಿದೆ.

ಸಕಲೇಶಪುರ ತಾಲ್ಲೂಕಿನ ಅರೇಹಳ್ಳಿ ಗ್ರಾಮದ ನಿವಾಸಿ ಬಸುಬ್ಬಿ (65) ಹಾಗೂ ಮಗಳು ಝರೀನಾ , ಮಗ ಇಂತಿಯಾಜ್ಗೆ ಗಂಭೀರ ಗಾಯಗಳಾಗಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಮದುವೆಗೆಂದು ಹುಬ್ಬಳ್ಳಿಗೆ ಆಲ್ಟೋ ಕಾರಿನಲ್ಲಿ ತೆರಳುತ್ತಿದ್ದಾಗ ವಿಷ್ಣುಸಮುದ್ರ ಕೆರೆಯ ಸಮೀಪ ಚಾಲಕನ ನಿಯಂತ್ರಣ ತಪ್ಪಿದ ಕಾರು ರಸ್ತೆ ಬದಿಯ ಡಿವೈಡರ್ಗೆ ಅಪ್ಪಳಿಸಿ ನಂತರ ಕೆರೆಗೆ ಉರುಳಿ ಬಿದ್ದಿದೆ.

 

ಫ್ರೆಶ್ ನ್ಯೂಸ್

Latest Posts

Featured Videos