ರಸ್ತೆ ಅಪಘಾತ: 5 ಸಾವು

ರಸ್ತೆ ಅಪಘಾತ: 5 ಸಾವು

ಹಿರಿಯೂರು, ಮೇ. 2, ನ್ಯೂಸ್ ಎಕ್ಸ್ ಪ್ರೆಸ್: ರಾಷ್ಟ್ರೀಯ ಹೆದ್ದಾರಿ 4ರಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ 1 ಕುಟುಂಬದ 5 ಜನರು ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಮೇಟಿಕುರ್ಕೆ ಬಳಿ ನಡೆದಿದೆ.

ಭದ್ರಾವತಿಯ ಭಂಡೆ ಮಾರಮ್ಮ ದೇವಿಯ ಜಾತ್ರೆಗೆ ಹೋಗಿ ಬೆಂಗಳೂರಿಗೆ ವಾಪಸ್ಸಾಗುತ್ತಿದ್ದಾಗ ಈ ಘಟನೆ ಸಂಭವಿಸಿದೆ.

ವೇಗವಾಗಿ ಚಲಿಸುತ್ತಿದ್ದ ಇನೋವಾ ಕಾರಿನ ಮುಂದಿನ ಟೈರ್ ಇದ್ದಕ್ಕಿದ್ದಂತೆ ಬ್ಲಾಸ್ಟ್ ಆಗಿ ರಸ್ತೆಯ ವಿಭಜಕಕ್ಕೆ ಡಿಕ್ಕಿ ಹೊಡೆದು, ಪಕ್ಕದ ರಸ್ತೆಯಲ್ಲಿ ಬೆಂಗಳೂರು ಕಡೆಯಿಂದ ಚಿತ್ರದುರ್ಗ ಮಾರ್ಗವಾಗಿ ಎದುರಿಗೆ ಬರುತ್ತಿದ್ದ ರಾಜಸ್ಥಾನ ಮೂಲದ ಲಾರಿಗೆ ರಭಸವಾಗಿ ಅಪ್ಪಳಿಸಿದ ಕಾರಣ ಕಾರಿನಲ್ಲಿದ್ದವರ ಪೈಕಿ 5 ಜನರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.

 

ಫ್ರೆಶ್ ನ್ಯೂಸ್

Latest Posts

Featured Videos