ದುಷ್ಕರ್ಮಿಗಳಿಂದ ಆ್ಯಸಿಡ್ ದಾಳಿ

ದುಷ್ಕರ್ಮಿಗಳಿಂದ ಆ್ಯಸಿಡ್ ದಾಳಿ

ಆನೇಕಲ್, ಜ. 04: ವ್ಯಕ್ತಿಯೊಬ್ಬ ರಸ್ತೆಯಲ್ಲಿ ಬೈಕ್ ನಲ್ಲಿ ಹೋಗುತ್ತಿರುವ ಸಂದರ್ಭದಲ್ಲಿ ದುಷ್ಕರ್ಮಿಗಳು ಅಸಿಡ್ ದಾಳಿ ನಡೆಸಿ ಪರಾರಿಯಾಗಿರುವ ಘಟನೆ ಆನೇಕಲ್ ತಾಲೂಕಿನ ಚಂದಾಪುರ ಹೆನ್ನಾಗರ ಬಿ ಹೊಸಹಳ್ಳಿಯಲ್ಲಿ ಸಂಭವಿಸಿದೆ.

ಇನ್ನು ಆಸಿಡ್ ದಾಳಿ ಘಟನೆಯಲ್ಲಿ ಶೇ.80ಭಾಗಷ್ಟು ಸುಟ್ಟಿರುವ ವ್ಯಕ್ತಿಯನ್ನು 50 ವರ್ಷದ ಜ್ಯೋತಪ್ಪ ಎಂದು ಗುರುತಿಸಲಾಗಿದೆ. ದ್ವಿಚಕ್ರ ವಾಹನದಲ್ಲಿ ಹೋಗುತ್ತಿದ್ದ ವೇಳೆ ಅಡ್ಡಗಟ್ಟಿದ ದುಷ್ಕರ್ಮಿಗಳು ದಿಢೀರ್ ಅಂತು ಆಸಿಡ್ ಮೈಮೇಲೆ ಸುರಿದು ಅಲ್ಲಿಂದ ಕಾಲ್ಕಿತ್ತಿದ್ದಾರೆ.

ಘಟನೆಯಲ್ಲಿ ಇಬ್ಬರು ದುಷ್ಕರ್ಮಿಗಳಿಂದ ಕೃತ್ಯ ನಡೆಸಿದ್ದಾರೆಂದು ತಿಳಿದುಬಂದಿದೆ. ಇನ್ನು ಆಸಿಡ್ ದಾಳಿ ವೇಳೆ ನೆರವಿಗಾಗಿ ಜ್ಯೋತಪ್ಪ ಕಿರುಚಾಡಿದ್ದಾರೆ. ಈ ವೇಳೆ ದಾರಿಹೋಕರು ಗಾಯಗೊಂಡಿದ್ದ ಜ್ಯೋತಪ್ಪನನ್ನು ಕರೆದೊಯ್ದು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಪ್ರಥಮ ಚಿಕಿತ್ಸೆ ಕೊಡಿಸಿದ್ದಾರೆ. ಹೆಚ್ಚಿನ ಚಿಕಿತ್ಸೆಗಾಗಿ ನಗರದ ಸೆಂಟ್ ಜಾನ್ಸ್ ಮೆಡಿಕಲ್ ಆಸ್ಪತ್ರೆಗೆ ರವಾನಿಸಲಾಗಿದೆ. ಸುದ್ದಿ ತಿಳಿಯುತ್ತಿದ್ದಂತೆ ಸೂರ್ಯಸಿಟಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.  ಅನೈತಿಕ ಸಂಬಂಧದ ಹಿನ್ನೆಲೆಯಲ್ಲಿ ಈ ದಾಳಿ ನಡೆಸಿದ್ದಾರೆಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ.

ಫ್ರೆಶ್ ನ್ಯೂಸ್

Latest Posts

Featured Videos