ಅಡ್ಜಸ್ಟ್‌ಮೆಂಟ್‌ ರಾಜಕಾರಣ ಪ್ರತಾಪ್‌ ಸಿಂಹ ಆರೋಪಕ್ಕೆ ಸಿಎಂ ಗರಂ!

ಅಡ್ಜಸ್ಟ್‌ಮೆಂಟ್‌ ರಾಜಕಾರಣ ಪ್ರತಾಪ್‌ ಸಿಂಹ ಆರೋಪಕ್ಕೆ ಸಿಎಂ ಗರಂ!

ಚಾಮರಾಜನಗರ: ರಾಜ್ಯದ ಗಮನ ಸೆಳೆದಿರುವ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವಿಚಾರ ಭಾರೀ ಕುತೂಹಲ ಮೂಡಿಸಿದೆ. ಮಹತ್ವದ ಬೆಳವಣಿಗೆಯಲ್ಲಿ ಸಂಸದ ಪ್ರತಾಪ್‌ ಸಿಂಹ ಬದಲಿಗೆ ರಾಜವಂಶಸ್ಥ ಯದುವೀರ್‌ ಒಡೆಯರ್‌ ಅವರನ್ನು ಅಭ್ಯರ್ಥಿಯಾಗಿ ಕಣಕ್ಕಿಳಿಸಲು ಬಿಜೆಪಿ ಮುಂದಾಗಿದೆ.

ಮೈಸೂರಿನಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಯಡಿಯೂರಪ್ಪ ನಡುವೆ ಹೊಂದಾಣಿಕೆ ರಾಜಕಾರಣ ನಡೆದಿದೆ ಎಂಬ ಸಂಸದ ಪ್ರತಾಪ್‌ಸಿಂಹ ಅವರ ಆರೋಪದ ಬಗ್ಗೆ ಚಾಮರಾಜನಗರದ ಹೆಗ್ಗವಾಡಿಯಲ್ಲಿ ಪ್ರತಿಕ್ರಿಯೆ ನೀಡಿದ ಸಿದ್ದರಾಮಯ್ಯ ಅವರು, ಯಾವನೋ ಒಬ್ಬ ದಾರಿಯಲ್ಲಿ ಹೋಗುವವರು ಹೇಳಿದ್ರೆ ಆಗಲ್ಲ. ಈಗ ಪ್ರತಾಪ್‌ ಸಿಂಹ ಅವರಿಗೆ ಬಿಜೆಪಿಯವರು ಟಿಕೆಟ್‌ ನಿರಾಕರಿಸಿದ್ದಾರಲ್ಲಾ ಯಾಕೆ? ನಾನು ಹೊಂದಾಣಿಕೆ ಮಾಡಿದ್ನಾ? ಯದುವೀರ್ ಒಡೆಯರ್‌ ಅವರಿಗೆ ನಾನು ಬಿಜೆಪಿಗೆ ಹೋಗಿ ನಿಲ್ಲು ಅಂತ ಹೇಳಿದ್ನಾ? ಪ್ರತಾಪ್ ಸಿಂಹ ಹೆಸರು ಕೆಡಿಸಿಕೊಂಡಿದ್ದಾರೆ ಅಂತ ಅವರಿಗೆ ಟಿಕೆಟ್ ಕೊಡ್ತಿಲ್ಲ ಅನ್ಸುತ್ತೆ. ಅದನ್ನು ಬಿಟ್ಟು ನೀವೇ ಸೃಷ್ಟಿ ಮಾಡಿ ಹೊಂದಾಣಿಕೆ ರಾಜಕೀಯ ಅಂತ ಹೇಳಿದ್ರೆ ಹೇಗೆ ಎಂದು ಪ್ರಶ್ನಿಸಿದರು.

ಫ್ರೆಶ್ ನ್ಯೂಸ್

Latest Posts

Featured Videos