ಡಿಕೆಶಿ ಆಸ್ಪತ್ರೆಗೆ ದಾಖಲು

ಡಿಕೆಶಿ ಆಸ್ಪತ್ರೆಗೆ ದಾಖಲು

ಬೆಂಗಳೂರು, ನ. 12 : ಮಾಜಿ ಸಚಿವ ಡಿ.ಕೆ ಶಿವಕುಮಾರ್ ಅವರು ಮತ್ತೆ ಆಸ್ಪತ್ರೆಗೆ ದಾಖಲಾಗಿದ್ದಾರೆ. ಜಾರಿ ನಿರ್ದೇಶನಾಲಯ (ಇಡಿ) ಬಂಧನಕ್ಕೆ ಒಳಗಾದ ಮಾಜಿ ಸಚಿವ ಡಿಕೆಶಿ ಸೋಮವಾರ ಮಧ್ಯರಾತ್ರಿ ಎದೆನೋವು ಮತ್ತು ಉಸಿರಾಟ ತೊಂದರೆ ಕಾಣಿಸಿಕೊಂಡ ಹಿನ್ನೆಲೆ ಶೇಷಾದ್ರಿಪುರಂ ಬಳಿಯಿರುವ ಅಪೋಲೋ ಅಸ್ಪತ್ರೆಗೆ ದಾಖಲು ಮಾಡಲಾಗಿದೆ.
ಡಿಕೆಶಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿದ್ದರು. ಬಿಪಿ ಶುಗರ್ ಪರೀಕ್ಷೆಗೆ ಎಂದು ದಾಖಲಾಗಿ ಚಿಕಿತ್ಸೆ ಪಡೆದಿದ್ದರು. ಇದೀಗ ಮತ್ತೆ ನಿನ್ನೆ ಮಧ್ಯರಾತ್ರಿ 1 ಗಂಟೆ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಲು ದಾಖಲಾಗಿದ್ದಾರೆ.
ಡಿಕೆಶಿಗೆ ಶಾಪ:
ಮಾಜಿ ಸಚಿವ ಡಿ.ಕೆ ಶಿವಕುಮಾರ್ ಗೆ ಮೈಲಾರಲಿಂಗೇಶ್ವರನ ಶಾಪ ಕಾರಣ. ಅವರು ಜೈಲಿಗೆ ಹೋದರು ಅನ್ನೋ ಮಾತುಗಳು ಕೇಳಿ ಬಂದಿತ್ತು.ಡಿಕೆಶಿ ಬಳ್ಳಾರಿ ಜಿಲ್ಲೆಯ ಹೂವಿನ ಹಡಗಲಿಯ ದೇವಸ್ಥಾನದ ಮೇಲೆ ಹೆಲಿಕಾಪ್ಟರ್ ನಲ್ಲಿ ತೆರಳಿದ್ದರಿಂದ ಮೈಲಾರ ಲಿಂಗೇಶ್ವರನ ಶಾಪಕ್ಕೆ ಗುರಿಯಾಗಿದ್ದಾರೆ. ಅಪವಾದದಿಂದ ಮುಕ್ತವಾಗಿ ಶಾಪದಿಂದ ಮುಕ್ತಿ ಪಡೆಯಲು ಡಿಕೆಶಿ ಮೈಲಾರ ಲಿಂಗೇಶ್ವರನ ದರ್ಶನಕ್ಕೆ ಮುಂದಾಗಿದ್ದಾರೆ. ನ.17 ರಂದು ಹೂವಿನ ಹಡಗಲಿಗೆ ಹೋಗಿ ಮೈಲಾರಲಿಂಗೇಶ್ವರನ ದರ್ಶನ ಪಡೆದು ಪೂಜೆ ಸಲ್ಲಿಸಲು ಮುಂದಾಗಿದ್ದಾರೆ.

ಫ್ರೆಶ್ ನ್ಯೂಸ್

Latest Posts

Featured Videos