ನವದೆಹಲಿ, ಆ. 30: ಸೆ. 15ರಿಂದ ಭಾರತದಲ್ಲಿ ನಡೆಯುವ ದಕ್ಷಿಣ ಆಫ್ರಿಕಾ ವಿರುದ್ಧದ ಟಿ20 ಸರಣಿಗೆ ಭಾರತೀಯ ತಂಡವನ್ನು ಆಯ್ಕೆ ಮಾಡಲಾಗಿದೆ. ನಿರೀಕ್ಷೆಯಂತೆ ಮಹೇಂದ್ರ ಸಿಂಗ್ ಧೋನಿ ಅವರನ್ನು ತಂಡಕ್ಕೆ ಸೇರಿಸಿಕೊಂಡಿಲ್ಲ. ಸದ್ಯ ಧೋನಿ ಅಮೆರಿಕ ಪ್ರವಾಸದಲ್ಲಿದ್ದಾರೆ. ಹಾರ್ದಿಕ್ ಪಾಂಡ್ಯ ತಂಡಕ್ಕೆ ಮರಳಿದ್ದಾರೆ. ಭುವನೇಶ್ವರ್ ಕುಮಾರ್ಗೆ ವಿಶ್ರಾಂತಿ ನೀಡಲಾಗಿದೆ.