ನವದೆಹಲಿ, ಮೇ. 25, ನ್ಯೂಸ್ ಎಕ್ಸ್ ಪ್ರೆಸ್: ಲೋಕಸಭಾ ಚುನಾವಣೆ ಮತ ಎಣಿಕೆ ಮುಗಿಯುತ್ತಿದ್ದಂತೆ ಕಾಂಗ್ರೆಸ್ ಶಾಕ್ ಗೆ ಒಳಗಾಗಿದೆ. ಈ ಬಾರಿ ಬರೀ 52 ಸೀಟುಗಳು ಮಾತ್ರ ಲಭಿಸಿ ತೀವ್ರ ಮುಜುಗರಕ್ಕೀಡಾಗಿದೆ.
ಅದರ ಬೆನ್ನಲ್ಲೇ ಸದ್ಯ ಪಕ್ಷವನ್ನು ಮುನ್ನಡೆಸುತ್ತಿರುವ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಸೋಲಿನ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡುತ್ತಾರೆ ಎಂದು ದೊಡ್ಡಮಟ್ಟದಲ್ಲಿ ವರದಿಯಾಗಿತ್ತು. ಆದರೆ, ಆ ಸುದ್ದಿ ಸುಳ್ಳು. ರಾಹುಲ್ ಗಾಂಧಿ ರಾಜೀನಾಮೆಯನ್ನು ಪಕ್ಷ ಕೇಳಿಲ್ಲ. ಅವರು ಅಧ್ಯಕ್ಷ ಸ್ಥಾನ ತೊರೆಯುವುದಿಲ್ಲ ಎಂದು ಪಕ್ಷವೇ ತಿಳಿಸಿದೆ.
ಹಾಗೊಮ್ಮೆ ರಾಹುಲ್ ಗಾಂಧಿ ಏನಾದರೂ ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಹೇಳಿದ್ದರೂ ಪಕ್ಷ ಅದನ್ನು ತಿರಸ್ಕರಿಸುತ್ತಿತ್ತು. ಏಕೆಂದರೆ ಅವರು ಚುನಾವಣಾ ಕಾರ್ಯತಂತ್ರ ಹಾಗೂ ಎಲ್ಲ ಕ್ಷೇತ್ರಗಳ ಅಭ್ಯರ್ಥಿಗಳ ಆಯ್ಕೆಯ ಬಗ್ಗೆ ಸಮಿತಿಗೆ ಸಂಪೂರ್ಣ ಮಾಹಿತಿ ನೀಡಿದ್ದರು ಎಂದು ಕಾಂಗ್ರೆಸ್ ಮುಖಂಡರು ತಿಳಿಸಿದ್ದಾರೆ.