ದೇವನಹಳ್ಳಿ: ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಟ್ಯಾಕ್ಸಿ ಚಾಲಕರು ಮಾಧ್ಯಮ ವರ್ಗದವರಿಗೆ ಅಲ್ಲಿನ ಸಿಬ್ಬಂದಿಗಳಿಗೆ ಸಿಹಿ ಸುದ್ದಿ ಎಂದು ಲಭಿಸಿದೆ ಅದೇನೆಂದರೆ ವಿಮಾನ ನಿಲ್ದಾಣದಲ್ಲಿ ಸಹ ಅತಿ ಕಡಿಮೆ ಬೆಲೆಗೆ ಊಟ ತಿಂಡಿ ಸೌಲಭ್ಯ ಸಿಗಲಿದೆ.
ಕರ್ನಾಟಕ ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆಗಳ ಪೈಕಿ ಇಂದಿರಾ ಕ್ಯಾಂಟೀನ್ ಸಂಖ್ಯೆಗಳನ್ನು ಹೆಚ್ಚಿಸುವುದು ಒಂದಾಗಿದೆ. ಬೆಂಗಳೂರು ಕೆಂಪೇಗೌಡ ಏರ್ಪೋರ್ಟ್ ನಲ್ಲಿ ಶೀಘ್ರವೇ 2 ಇಂದಿರಾ ಕ್ಯಾಂಟೀನ್ ಆರಂಭವಾಗಲಿದೆ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಹೇಳಿದರು.
ಡಿಸಿಎಂ ಡಿಕೆ ಶಿವಕುಮಾರ್ ನಮ್ಮ ಸರ್ಕಾರದ ಇಂದಿರಾ ಕ್ಯಾಂಟೀನ್ ಯೋಜನೆ ಬಡವರ ಹಸಿವು ನೀಗಿಸುವ ಮೂಲಕ ಮೆಚ್ಚುಗೆಗೆ ಪಾತ್ರವಾಗಿದ್ದು. ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಶೀಘ್ರವೇ 2 ಇಂದಿರಾ ಕ್ಯಾಂಟೀನ್ ಗಳು ಕಾರ್ಯ ಆರಂಭ ಮಾಡಲಿವೆ ಎಂದು ಈ ಮೂಲಕ ಹಲವು ವರ್ಷಗಳ ಬೇಡಿಕೆ ಈಡೇರಲಿದೆ ಎಂದಿದ್ದಾರೆ.