ಅಕ್ರಮ ಗಣಿಗಾರಿಕೆ ಪ್ರಕರಣ: ಆನಂದ್​ ಸಿಂಗ್​, ನಾಗೇಂದ್ರ ವಿರುದ್ಧ ಜಾಮೀನು ರಹಿತ ವಾರೆಂಟ್​

ಅಕ್ರಮ ಗಣಿಗಾರಿಕೆ ಪ್ರಕರಣ: ಆನಂದ್​ ಸಿಂಗ್​, ನಾಗೇಂದ್ರ ವಿರುದ್ಧ ಜಾಮೀನು ರಹಿತ ವಾರೆಂಟ್​

ಬೆಂಗಳೂರು, ಮಾ.15, ನ್ಯೂಸ್ ಎಕ್ಸ್ ಪ್ರೆಸ್: ಅಕ್ರಮ ಗಣಿಗಾರಿಕೆ ಪ್ರಕರಣ ಕುರಿತ ಸಾಕ್ಷಿ ವಿಚಾರಣೆ ವೇಳೆ ಸಮನ್ಸ್​ ನೀಡಿದರೂ ಆನಂದ್​ ಸಿಂಗ್​ ಹಾಗೂ ನಾಗೇಂದ್ರ ನ್ಯಾಯಾಲಯಕ್ಕೆ ಹಾಜರಾಗಿರಲಿಲ್ಲ. ಈ ಹಿನ್ನೆಲೆಯಲ್ಲಿ ಅವರನ್ನು ಬಂಧಿಸಿ ಕರೆ ತರುವಂತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಿಂದ ಆದೇಶ ನೀಡಿದೆ.
ಅಕ್ರಮ ಗಣಿಗಾರಿಕೆ ಪ್ರಕರಣ: ಆನಂದ್​ ಸಿಂಗ್​, ನಾಗೇಂದ್ರ ವಿರುದ್ಧ ಜಾಮೀನು ರಹಿತ ವಾರೆಂಟ್​ ಜಾರಿ ನಾಗೇಂದ್ರ ಆನಂದ್​ ಸಿಂಗ್​
ಬೆಂಗಳೂರು (ಮಾ.15): ಅಕ್ರಮ ಅದಿರು ಗಣಿಗಾರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಆನಂದ್ ಸಿಂಗ್ ಹಾಗೂ ನಾಗೇಂದ್ರ ಜಾಮೀನು ರಹಿತ ಬಂಧನದ ವಾರೆಂಟ್​ ಜಾರಿ ಮಾಡಿ ನ್ಯಾಯಾಲಯ ಆದೇಶ ನೀಡಿದೆ.
ಅಕ್ರಮ ಗಣಿಗಾರಿಕೆ ಪ್ರಕರಣ ಕುರಿತ ಸಾಕ್ಷಿ ವಿಚಾರಣೆ ವೇಳೆ ಸಮನ್ಸ್​ ನೀಡಿದರೂ ಆನಂದ್​ ಸಿಂಗ್​ ಹಾಗೂ ನಾಗೇಂದ್ರ ನ್ಯಾಯಾಲಯಕ್ಕೆ ಹಾಜರಾಗಿರಲಿಲ್ಲ. ಈ ಹಿನ್ನೆಲೆಯಲ್ಲಿ ಅವರನ್ನು ಬಂಧಿಸಿ ಕರೆ ತರುವಂತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಿಂದ ಆದೇಶ ನೀಡಿದೆ.
ಈಗಲ್ಟನ್​ ರೆಸಾರ್ಟ್​ ಹಲ್ಲೆ ಗಲಾಟೆಯಿಂದಾಗಿ ಗಂಭೀರ ಗಾಯಗೊಳಗಾಗಿದ್ದ ಆನಂದ್​ ಸಿಂಗ್​ ಇದೇ ಕಾರಣವನ್ನು ನ್ಯಾಯಾಲಯದ ಮುಂದೆ ಹಾಜರಾಗಿರಲಿಲ್ಲ. ಅಲ್ಲದೇ ತಮ್ಮ ವಕೀಲರ ಮೂಲಕ ವೈದ್ಯಕೀಯ ದಾಖಲೆಗಳನ್ನು ಸಲ್ಲಿಸಿ ಹಾಜರಾತಿ ವಿನಾಯಿತಿ ಕೋರಿ ಮನವಿ ಮಾಡಿದ್ದರು.

ಫ್ರೆಶ್ ನ್ಯೂಸ್

Latest Posts

Featured Videos