ಗಗನಕ್ಕೇರುತ್ತಿದೆ ಎಲ್ಲಾ ತರಕಾರಿ ಬೆಲೆ

ಗಗನಕ್ಕೇರುತ್ತಿದೆ ಎಲ್ಲಾ ತರಕಾರಿ ಬೆಲೆ

ಬೆಂಗಳೂರು, ಡಿ. 16: ಕೆಲವು ದಿನಗಳಿಂದ ರಾಜ್ಯದಲ್ಲಿ ಈರುಳ್ಳಿ ಬೆಲೆ ಗಗನಕ್ಕೇರಿತ್ತು. ಹೌದು, ಈಗ ಈರುಳ್ಳಿ ಜೊತೆ ಇನ್ನಿತರ ತರಕಾರಿಯ ಬೆಲೆ ಕೂಡ ಜಾಸ್ತಿಯಾಗಿದೆ. ತರಕಾರಿ ಕೊಳ‍್ಳುವ ಗ್ರಾಹಕರಿಗೆ ಮತ್ತೊಂದು ಶಾಕ್ ಎದುರಾಗಿದ್ದು, ನಗರದ ಮಾರುಕಟ್ಟೆಯಲ್ಲಿ ಬಟಾಣಿ ಮತ್ತು ಟೊಮೆಟೋ ಹೊರತುಪಡಿಸಿದರೆ ಬೆಂಡೆಕಾಯಿ , ತೊಂಡೆಕಾಯಿ, ಬೀನ್ಸ್, ಕ್ಯಾರೆಟ್, ಗೋರಿಕಾಯಿ, ಬೀಟ್ರೂಟ್, ಈರುಳ್ಳಿ, ಬೆಳ್ಳುಳ್ಳಿ, ಆಲೂಗಡ್ಡೆ ಸೇರಿದಂತೆ ಬಹುತೇಕ ತರಕಾರಿಗಳ ದರದಲ್ಲಿ ಏರಿಕೆಯಾಗಿದೆ.

ಬಟಾಣಿ ಮಾತ್ರ ಕೆಜಿಗೆ 40-50 ರೂ. ಟೊಮೆಟೋ ಕೆಜಿ 20 ರೂ.ಗೆ ಖರೀದಿಯಾಗುತ್ತಿವೆ. ಕೆಲ ದಿನಗಳಿಂದ ಬಹುಬೇಡಿಕೆ ಇದ್ದ ಈರುಳ್ಳಿ ಸಗಟು ಮಾರುಕಟ್ಟೆಯಲ್ಲಿ ಕೆಜಿಗೆ 60ರೂ.ನಿಂದ 100 ರೂ. ನಿಗದಿಯಾಗಿದೆ. ವಿವಿಧ ಸೊಪ್ಪುಗಳ ದರದಲ್ಲಿ ಇಳಿಕೆಯಾಗಿದ್ದರೆ, ಸಬ್ಬಕ್ಕಿ ಸೊಪ್ಪು ಪೂರೈಕೆ ಇಲ್ಲದೆ ಬೆಲೆ ಗಗನಕ್ಕೇರಿದೆ.

 

ಫ್ರೆಶ್ ನ್ಯೂಸ್

Latest Posts

Featured Videos