ಬೆಳಗಾವಿ, ಏ. 27, ನ್ಯೂಸ್ ಎಕ್ಸ್ ಪ್ರೆಸ್ : ಗೋಕಾಕ್ ಸಾಹುಕಾರ ರೆಬೆಲ್ ಶಾಸಕ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಪುತ್ರ ಅಮರ್ ಜಾರಕಿಹೊಳಿಯ ರಾಜಕೀಯ ಪ್ರವೇಶಕ್ಕೆ ವೇದಿಕೆ ಸಜ್ಜಾಗುತ್ತಿದೆ. ಬೆಳಗಾವಿ ಕೆಎಂಎಫಗೆ ಅಮರ್ ಜಾರಕಿಹೊಳಿ ನಿರ್ದೇಶಕರಾಗಿ ಅವಿರೋಧ ಆಯ್ಕೆಯಾಗಿದ್ದಾರೆ. ಇದೇ ತಿಂಗಳ 28 ರಂದು ನಡೆಯಲಿರುವ ಕೆಎಂಎಫ ನಿರ್ದೇಶಕರ ಚುನಾವಣೆಯಲ್ಲಿ ಒಟ್ಟು 14 ಸ್ಥಾನಗಳಿಗೆ ಚುನಾವಣೆ ನಡೆಯಬೇಕಾಗಿದ್ದು, ಆದರೆ ಇದೀಗ 7 ಸ್ಥಾನಗಳು ನಿರ್ದೇಶಕ ಹುದ್ದೆಗೆ ಅವಿರೋಧ ಆಯ್ಕೆಯಾಗಿದ್ದಾರೆ. ಮಾಜಿ ಸಚಿವ ಬಾಲಚಂದ್ರ ಜಾರಕಿಹೊಳಿ ಹಿಡಿತದಲ್ಲಿ ಇರುವ ಕೆಎಂಎಫ. ಬೆಳಗಾವಿ ಜಿಲ್ಲಾ ರಾಜಕಾರಣದಲ್ಲಿ ಕೆಎಂಎಫ ಮತ್ತು ಡಿಸಿಸಿ ಬ್ಯಾಂಕ್ ಪ್ರಮುಖ ಪಾತ್ರವಹಿಸುತ್ತದೆ. ಇನ್ನೂ ಚಿಕ್ಕಪ್ಪ ಬಾಲಚಂದ್ರ ಜಾರಕಿಹೊಳಿಯಿಂದ ಅಮರ್ ಕೆಎಂಎಫ ಎಂಟ್ರಿಯಾಗಿದ್ದಾರೆ. ಅಮರ್ ರಾಜಕೀಯ ಎಂಟ್ರಿಗೆ ಮೊದಲ ಮೆಟ್ಟಿಲು ಕೆಎಂಎಫ ನಿರ್ದೇಶಕರಾಗಿ ಎಂಟ್ರಿಕೊಟ್ಟಾಗಿದೆ. ಕಳೆದ ಒಂದು ವರ್ಷದಿಂದ ತಂದೆ ರಮೇಶ್ ಜಾರಕಿಹೊಳಿ ಜೊತೆ ಸಾರ್ವಜನಿಕವಾಗಿ ಕಾಣಿಸಿಕೊಳ್ಳುತ್ತಿರುವ ಅಮರ್ ಜಾರಕಿಹೊಳಿ.