ಅಂಬರೀಶ್ ಗೆ ಕರ್ನಾಟಕ ರತ್ನ ಪ್ರಶಸ್ತಿ

ಅಂಬರೀಶ್ ಗೆ ಕರ್ನಾಟಕ ರತ್ನ ಪ್ರಶಸ್ತಿ

ಬೆಂಗಳೂರು, ನ. 25 : ರೆಬಲ್ ಸ್ಟಾರ್ ಡಾ.ಅಂಬರೀಶ್ ರವರಿಗೆ ಕರ್ನಾಟಕ ರತ್ನ ಪ್ರಶಸ್ತಿ ಘೋಷಣೆ ಮಾಡಬೇಕೆಂದು ಯಶವಂತಪುರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಎಸ್.ಟಿ.ಸೋಮಶೇಖರ್ ಸರ್ಕಾರಕ್ಕೆ ಮನವಿ ಮಾಡಿದರು.
ಅಂಬರೀಶ್ ನಿಧನರಾಗಿ ಒಂದು ವರ್ಷವಾದ ಹಿನ್ನೆಲೆಯಲ್ಲಿ ಕಂಠೀರವ ಸ್ಟುಡಿಯೋದಲ್ಲಿರುವ ಅವರ ಸ್ಮಾರಕಕ್ಕೆ ಪೂಜೆ ಸಲ್ಲಿಸಿ ಅವರು ಮಾತನಾಡಿದರು. ನಾಲ್ಕು ದಶಕಗಳಿಂದ ಕನ್ನಡ ಚಿತ್ರರಂಗಕ್ಕೆ ಅಂಬರೀಶ್ ತಮ್ಮದೇ ಆದ ಕೊಡುಗೆ ನೀಡಿದ್ದರು. ನಾಡುನುಡಿ, ನೆಲಜಲ ಹೋರಾಟಗಳಲ್ಲೂ ತೊಡಗಿಸಿಕೊಂಡಿದ್ದ ಅವರು ಕರ್ನಾಟಕದ ಜನತೆಯ ಕೋಟ್ಯಂತರ ಅಭಿಮಾನಿಗಳ ಹೃದಯದಲ್ಲಿ ಶಾಶ್ವತವಾಗಿ ನೆಲೆಯೂದ್ದಾರೆ ಎಂದು ಸ್ಮರಿಸಿದರು.
ವರನಟ ಡಾ.ರಾಜ್ಕುಮಾರ್, ಸಾಹಸ ಸಿಂಹ ವಿಷ್ಣು ವರ್ಧನ್ ಅವರಂತೆಯೇ ಅಂಬರೀಶ್ ಕೂಡ ಒಬ್ಬ ಜನಪ್ರಿಯ ನಟರಾಗಿದ್ದಾರೆ. ಇಂತಹ ಮೇರುನಟನ ಸಾಧನೆಯನ್ನು ಪರಿಗಣಿಸಿ ಸರ್ಕಾರ ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿ ನೀಡುವುದು ಸೂಕ್ತವಾಗಿದೆ ಎಂದು ಅಭಿಪ್ರಾಯಪಟ್ಟರು.

ಫ್ರೆಶ್ ನ್ಯೂಸ್

Latest Posts

Featured Videos