ಬೆಂಗಳೂರು: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಎಂದು ರಾಜ್ಯದಲ್ಲಿ ಭರ್ಜರಿ ಪ್ರಚಾರ ಕೈಗೊಳ್ಳಲಿದ್ದಾರೆ, 5 ಜಿಲ್ಲೆಗಳ ಸಮಾವೇಶದಲ್ಲಿ ಭಾಗಿಯಾಗಲಿದ್ದಾರೆ.
ಕರ್ನಾಟಕ ಲೋಕಸಭಾ ಚುನಾವಣೆ ಕಣಕ್ಕೆ ದೆಹಲಿ ನಾಯಕರ ಆಗಮನವಾಗುತ್ತಿದೆ. ಆಯಾ ಪಕ್ಷದ ವರಿಷ್ಠರು ಆಗಮಿಸಿ ಕ್ಷೇತ್ರದಲ್ಲಿ ತಮ್ಮ ಅಭ್ಯರ್ಥಿಗಳು ಮತ್ತು ಕಾರ್ಯಕರ್ತರನ್ನು ಹುರಿದುಂಬಿಸಲಿದ್ದಾರೆ. ಇದೇ ಕಾರ್ಯಕ್ಕಾಗಿ ಬಿಜೆಪಿಯ ಚಾಣಕ್ಯ ಕೇಂದ್ರ ಗೃಹ ಸಚಿವ ಅಮಿತ್ ಶಾ ನಿನ್ನೆ ತಡರಾತ್ರಿ ಬೆಂಗಳೂರಿಗೆ ಆಗಮಿಸಿದ್ದಾರೆ.
ಲೋಕಸಭಾ ಚುನಾವಣೆ ಘೋಷಣೆ ಆದ ಬಳಿಕ ಅಮಿತ್ ಶಾ ಅವರ ಮೊದಲ ಕರ್ನಾಟಕ ಭೇಟಿ ಇದಾಗಿದೆ. ಇಂದು ಬೆಳಗ್ಗೆ ಅವರು ತಾವು ವಾಸ್ತವ್ಯ ಹೂಡಿರುವ ತಾಜ್ ವೆಸ್ಟೆಂಟ್ನಲ್ಲಿಯೇ ಮೈತ್ರಿ ಪಕ್ಷ ಜೆಡಿಎಸ್-ಬಿಜೆಪಿ ಸಮನ್ವಯ ಸಭೆ ನಡೆಸಲಿದ್ದಾರೆ.