ನಟಿ ಅಮೂಲ್ಯ ಮಾವನ ಮೇಲೆ ಚುನಾವಣಾ ಅಧಿಕಾರಿಗಳ ದಾಳಿ..!

ನಟಿ ಅಮೂಲ್ಯ ಮಾವನ ಮೇಲೆ ಚುನಾವಣಾ ಅಧಿಕಾರಿಗಳ ದಾಳಿ..!

ಬೆಂಗಳೂರು: ನಟಿ ಅಮೂಲ್ಯ ಮಾವ ಮಾಜಿ ಕಾರ್ಪೊರೇಟರ್ ರಾಮಚಂದ್ರ ಮನೆ ಮೇಲೆ ಚುನಾವಣಾ ಅಧಿಕಾರಿಗಳ ದಾಳಿ ನಡೆದಿದೆ. ಆರ್ ಆರ್ ನಗರದಲ್ಲಿರುವ ನಿವಾಸದ ಮನೆ ಮೇಲೆ ದಾಳಿ ನಡೆದಿದ್ದು, ನಿನ್ನೆ ರಾತ್ರಿ‌10 ಗಂಟೆ ಸುಮಾರಿಗೆ ದಾಳಿ ನಡೆದಿದೆ. 10 ವಾಹನಗಳಲ್ಲಿ ಬಂದಿದ ಸುಮಾರು 30ಕ್ಕೂ ಹೆಚ್ಚು  ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ.

ಆರ್.ಆರ್ ನಗರ ವಿಧಾನಸಭಾ ಕ್ಷೇತ್ರದ ಬಿಜೆಪಿ ಮುಖಂಡನಾಗಿರುವ ಆರ್​. ರಾಮಚಂದ್ರ ಹಾಗು ನಟಿ ಅಮೂಲ್ಯ ಮತ್ತು ಪತಿ ಜಗದೀಶ್ ವಿಚಾರಣೆ ಮಾಡಿದ್ದಾರೆ. ಸತತ 4 ಗಂಟೆಗಳ ಕಾಲ‌ ಶೋಧ‌ ಕಾರ್ಯ ಮಾಡಿದ್ದಾರೆ. ಚುನಾವಣಾ ಅಧಿಕಾರಿ, ಅಬಕಾರಿ ಪೊಲೀಸ್, ವಾಣಿಜ್ಯ ತೆರಿಗೆ ಅಧಿಕಾರಿಗಳು ಜಂಟಿ ದಾಳಿ ನಡೆಸಿದ್ದಾರೆ.

ದಾಳಿ ವೇಳೆ ಯಾವುದೇ ಬೆಲೆಬಾಳುವ ವಸ್ತುಗಳು ಅಥವಾ ಹಣ ಪತ್ತೆಯಾಗಿಲ್ಲ. ಮನೆಯ ಫಂಕ್ಷನ್ ಇದ್ದಿದ್ರಿಂದ  31 ಲೀಟರ್ ಲಿಕ್ಕರ್ ಸಂಗ್ರಹ ಮಾಡಲಾಗಿತ್ತು. ಲಿಕ್ಕರ್​ ವಶಕ್ಕೆ ಪಡೆದು ಹೊರಟಿದ್ದಾರೆ ಅಬಕಾರಿ ಅಧಿಕಾರಿಗಳು.

 

ಫ್ರೆಶ್ ನ್ಯೂಸ್

Latest Posts

Featured Videos