ವಿಜಯನಗರ, ಸೆ. 25 : ಸುಪ್ರೀಂಕೋರ್ಟ್ ತೀರ್ಪು ಅನರ್ಹರ ಪರವಾಗಿ ಬಂದಲ್ಲಿ ಎಲ್ಲ ಅನರ್ಹರಿಗೂ ಬಿಜೆಪಿಯಿಂದ ಉಪಚುನಾವಣೆ ಟಿಕೆಟ್ ನೀಡಲಾಗುತ್ತದೆ ಎಂಬುದು ಬಹುತೇಕ ಖಾಯಂ ಆಗಿದೆ. ಅಂತೆಯೇ ಆನಂದ್ ಸಿಂಗ್ ಸಹ. ನಿನ್ನೆ ವಿಜಯನಗರದಲ್ಲಿ ಜಂಟಿ ಸುದ್ದಿಗೋಷ್ಠಿ ನಡೆಸಿದ ಹೊಸಪೇಟೆ ತಾಲ್ಲೂಕಿನ ಬಿಜೆಪಿಯ ವಿವಿಧ ಮೋರ್ಚಾ ಅಧ್ಯಕ್ಷರು, ಪದಾಧಿಕಾರಿಗಳು ಆನಂದ್ ಸಿಂಗ್ ಬಿಜೆಪಿ ಟಿಕೆಟ್ ನೀಡಬಾರದು ಎಂದು ಒತ್ತಾಯಿಸಿದರು.
ಆದರೆ ಅನರ್ಹ ಶಾಸಕ ಆನಂದ್ ಸಿಂಗ್ಗೆ ಟಿಕೆಟ್ ನೀಡಬಾರದು ಎಂದು ಬಿಜೆಪಿಗರೇ ಆಕ್ಷೇಪ ಎತ್ತಿದ್ದು, ವಿಜಯನಗರ ಕ್ಷೇತ್ರದ ಬಿಜೆಪಿ ಮುಖಂಡರು ಈ ಬಗ್ಗೆ ರಾಜ್ಯ ಬಿಜೆಪಿ ನಾಯಕರಿಗೆ ಮನವಿ ಮಾಡಿದ್ದಾರೆ.