ಬೆಂಗಳೂರು, ಮೇ. 6, ನ್ಯೂಸ್ ಎಕ್ಸ್ ಪ್ರೆಸ್: ಜೀ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಅಚ್ಚು ಮೆಚ್ಚಿನ ರಿಯಾಲಿಟಿ ಷೋ ಸರಿಗಮಪ ಈ ಕಾರ್ಯಕ್ರಮಕ್ಕೆ ವೀಕ್ಷಕರ ವರ್ಗ ಹೆಚ್ಚಾಗಿಯೇ ಇದೆ ಚಿಕ್ಕ ಮಕ್ಕಳಿಂದ ಹಿಡಿದು ದೊಡ್ಡವರ ತನಕ ಕೂಡ ಈ ಕಾರ್ಯಕ್ರಮದಲ್ಲಿ ಗಾಯಕರಿದ್ದಾರೆ. ಅದರಲ್ಲಿ ಎಲ್ಲರನ್ನೂ ಅಟ್ರಾಕ್ಟ್ ಮಾಡೋದು ನಿರೂಪಕಿ ಅನುಶ್ರೀ. ಹರಳು ಉರಿದಂತೆ ಮಾತನಾಡುವ ಈಕೆಯನ್ನು ಮಾತಿನ ಮಲ್ಲಿ ಪಟ್ ಪಟ್ ಪಟಾಕಿ ಅಂತೆಲ್ಲಾ ಕರೆಯುತ್ತಾರೆ ಇದೀಗ ಆಕೆಗೆ ಮತ್ತೊಂದು ಬಿರುದು ಸಿಕ್ಕಿದೆ.
ಕಿರುತೆರೆಯಲ್ಲಿ ಮಾತಿನ ಮೂಲಕ ಚಾಪು ಮೂಡಿಸಿರುವ ಕರಾವಳಿ ತೀರದ ಬೆಡಗಿ ಅನುಶ್ರೀ ಅವರಿಗೆ ಹೊಸ ಬಿರುದನ್ನು ನಾದಬ್ರಹ್ಮ, ಸ್ವರದಿಗ್ಗಜ ಅಂತಾನೇ ಫೇಮಸ್ ಆಗಿರುವ ಹಂಸಲೇಖ ಅವರು ನೀಡಿದ್ದಾರೆ. ಸಂಗೀತ ಕಾರ್ಯಕ್ರಮದ ನಿರೂಪಕಿಯಾಗಿರುವ ಅನುಶ್ರೀ ಎಲ್ಲರ ಅಚ್ಚುಮೆಚ್ಚಿನ ತಾರೆ ಎನ್ನಬಹುದು. ಕಾರ್ಯಕ್ರಮದ ಮಹಾತೀರ್ಪುಗಾರರ ಸ್ಥಾನದಲ್ಲಿರುವ ಹಂಸಲೇಖ ಹೊಸ ಬಿರುದು ನೀಡಿ ಅನುಶ್ರೀ ಅವರ ಕಾರ್ಯಕ್ಕೆ ಮೆಚ್ಚುಗೆ ಸೂಚಿಸಿದ್ದಾರೆ. ಇದೀಗ ‘ಪ್ರಸಂಗಗೀತ’ ಎಂಬ ಹೊಸ ಕನ್ನಡ ಬಿರುದನ್ನು ಹಂಸಲೇಖ ನೀಡಿದ್ದಾರೆ. ಪ್ರಸಂಗಗೀತ ಬಿರುದು ಪಡೆದ ಅನುಶ್ರೀ ಸಂತೋಷವನ್ನು ವ್ಯಕ್ತಪಡಿಸಿದರು.