ಮತ್ತೊಂದು ವಿವಾದಕ್ಕಿಡಾದ ತೇಜಸ್ವಿ ಸೂರ್ಯ

ಮತ್ತೊಂದು ವಿವಾದಕ್ಕಿಡಾದ ತೇಜಸ್ವಿ ಸೂರ್ಯ

ಬೆಂಗಳೂರು, ಡಿ. 22:  ಪೌರತ್ವ ತಿದ್ದುಪಡಿ ಕಾಯ್ದೆ ಬೆಂಬಲಿಸಿ ಇಂದು ಬೆಂಗಳೂರಿನ ಟೌನ್ ಹಾಲ್ ಮುಂದೆ ಜನಜಾಗೃತಿಯಲ್ಲಿ ಮಾತನಾಡಿದ ಅವರು, ಇಲ್ಲಿ ಯಾರೂ ಯಾರನ್ನೂ ಕರೆದಿಲ್ಲ. ಎಲ್ಲರೂ ಸ್ವ ಇಚ್ಛೆಯಿಂದ ಬಂದಿದ್ದಾರೆ.  ಪೌರತ್ವಕ್ಕೆ ಎಷ್ಟು ಬೆಂಬಲ ಇದೆ ಎಂಬುದಕ್ಕೆ ಇದೇ ಸಾಕ್ಷಿ. ಎದೆ ಸೀಳಿದರೆ ಎರಡಕ್ಷರ ಇಲ್ಲದವರು ಬಂದು ಸಿಎಎ ವಿರುದ್ಧ ಪ್ರತಿಭಟನೆ ಮಾಡುತ್ತಿದ್ದಾರೆ. ಪಂಕ್ಚರ್ ಹಾಕೋರು ಬಂದು ಪ್ರತಿಭಟನೆ ಮಾಡುತ್ತಾರೆ ಎಂದು  ವಿವಾದಾತ್ಮಕ ಹೇಳಿಕೆ ನೀಡಿದರು. ಎದೆ ಸೀಳಿದರೆ ನಾಲ್ಕು ಅಕ್ಷರ ಇಲ್ಲದವರು ಕೂಡ ಬೀದಿಗಿಳಿದು ಪ್ರತಿಭಟನೆ ಮಾಡುತ್ತಿದ್ದಾರೆ ಎಂದು ಹೇಳುವ ಮೂಲಕ ಬೆಂಗಳೂರು ದಕ್ಷಿಣ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ವಿವಾದ ಹಟ್ಟುಹಾಕಿದ್ದಾರೆ.

 

 

ಫ್ರೆಶ್ ನ್ಯೂಸ್

Latest Posts

Featured Videos