ಎನ್ ಡಿ ಆರ್ ಎಫ್ ಸಿಬ್ಬಂದಿಗಳೆ ನೀರುಪಾಲು

ಎನ್ ಡಿ ಆರ್ ಎಫ್ ಸಿಬ್ಬಂದಿಗಳೆ ನೀರುಪಾಲು

ಕೊಪ್ಪಳ, ಆ. 12 : ಪ್ರವಾಹಕ್ಕೆ ಸಿಲುಕಿಕೊಂಡ ಜನರನ್ನು ರಕ್ಷಣೆ ಮಾಡಲು ಬಂದ ಎನ್ಡಿಆರ್ಎಫ್ ತಂಡದ ಸಿಬ್ಬಂದಿಗಳೆ ನೀರಿನಲ್ಲಿ ಕೊಚ್ಚಿಕೊಂಡು ಹೋಗಿರುವ ಘಟನೆ ನಡೆದಿದೆ. ತುಂಗಭದ್ರಾ ನದಿ ಪ್ರವಾಹದಲ್ಲಿ ಬೋಟ್ ಮುಳುಗಿ ಐವರು ರಕ್ಷಣಾ ಸಿಬ್ಬಂದಿ ಕೊಚ್ಚಿ ಹೋಗಿದ್ದಾರೆ. ಪ್ರವಾಹದಲ್ಲಿ ಸಿಲುಕಿದ್ದ ಸಂತ್ರಸ್ತರನ್ನು ರಕ್ಷಣೆ ಮಾಡುತ್ತಿರುವ ರಕ್ಷಣಾ ಸಿಬ್ಬಂದಿಯೇ ನೀರುಪಾಲಾದ ಘಟನೆ ಕೊಪ್ಪಳದ ಗಂಗಾವತಿ ತಾಲೂಕಿನ ವಿರುಪಾಪುರ ಗಡ್ಡಿ ಬಳಿ ನಡೆದಿದೆ.
ಎನ್ಡಿಆರ್ಎಫ್ ತಂಡದ ಇಬ್ಬರು ವಿರುಪಾಪುರ ಗಡ್ಡಿಯಲ್ಲಿ ಸಿಲುಕಿದ್ದ ವಿದೇಶಿಗರು ಸೇರಿ 300 ಮಂದಿಯನ್ನು ರಕ್ಷಣೆ ಮಾಡಲು ಸಿಬ್ಬಂದಿ ತೆರಳಿದ್ದರು. ನೀರಿನ ರಭಸಕ್ಕೆ ಬೋಟ್ ಮುಗುಚಿ ಬಿದ್ದ ಹಿನ್ನಲೆಯಲ್ಲಿ ಅವಘಡ ಸಂಭವಿಸಿದೆ ಎಂದು ಹೇಳಲಾಗುತ್ತಿದೆ. ಸಿಬ್ಬಂದಿಗಾಗಿ ಹುಡುಕಾಟ ನಡೆಸಲಾಗುತ್ತಿದೆ. ಕಳೆದ 10 ದಿನಗಳಿಂದ ಎನ್ಡಿಆರ್ ಎಫ್ ತಂಡ ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿಕೊಂಡಿದೆ.

ಫ್ರೆಶ್ ನ್ಯೂಸ್

Latest Posts

Featured Videos