ಬೆಂಗಳೂರು, ಡಿ. 14: ಜನವರಿ 8 ರಂದು ಅಖಿಲ ಭಾರತ ರೈತ ಸಂಘರ್ಷ ಸಮನ್ವಯ ಸಮತಿ ವತಿಯಿಂದ ಗ್ರಾಮೀಣ ಕರ್ನಾಟಕ ಬಂದ್ ಗೆ ಕರೆ ನೀಡಲಾಗಿದೆ.
ಎಲ್ಲಾ ರೈತರನ್ನು ಸಾಲದಿಂದ ಮುಕ್ತಿಗೊಳಿಸಬೇಕು. ಋಣಮುಕ್ತ ಕಾಯ್ದೆ ಜಾರಿ ಮತ್ತು ಸ್ವಾಮಿನಾಥನ್ ವರದಿ ಜಾರಿ, ಪ್ರವಾಹ ಸಂತ್ರಸ್ತರಿಗೆ ಸೂಕ್ತ ಪರಿಹಾರ ಸೇರಿದಂತೆ ಹಲವು ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಿ ಗ್ರಾಮೀಣ ಕರ್ನಾಟಕ ಬಂದ್ ಗೆ ಕರೆ ನೀಡಲಾಗಿದೆ.
ರಾಜ್ಯ ರೈತ ಸಂಘದ ಸಂಘಟನೆಗಳು, ಅಖಿಲ ಭಾರತ ಕಿಸಾನ್ ಸಭಾ, ಕೃಷಿ ಕೂಲಿಕಾರರ ಸಂಘಗಳು ಸೇರಿದಂತೆ ಹಲವು ಸಂಘಟನೆಗಳು ಬಂದ್ ನಲ್ಲಿ ಭಾಗವಹಿಸಲಿವೆ ಎಂದು ಅಖಿಲ ಭಾರತ ರೈತ ಸಂಘರ್ಷ ಸಮನ್ವಯ ಸಮಿತಿ ಹೇಳಿದೆ. ರಾಷ್ಟ್ರಪತಿ ನೀಡಿದ್ದ ಭರವಸೆಯನ್ನು ನೆನಪಿಸುವ ಉದ್ದೇಶದಿಂದ ಡಿ.23 ರಿಂದ ಜ.3 ರವರೆಗೆ ಜಿಲ್ಲಾ ಕೇಂದ್ರಗಳಲ್ಲಿ ರೈತರ ಬೃಹತ್ ಸಮಾವೇಶ, ಮೆರವಣಿಗೆ ಮೂಲಕ ರಾಷ್ಟ್ರಪತಿಗೆ ಮುಷ್ಕರದ ನೋಟಿ ಜಾರಿಯ ಹೋರಾಟ ನಡೆಸಲಾಗುವುದು ಎಂದರು.