ಬೆಂಗಳೂರು,ನ. 20 : ಯುವಕರಿಬ್ಬರು ಅನುಮಾನಾಸ್ಪದವಾಗಿ ಮೃತಪಟ್ಟ ಘಟನೆ ವೈಯಾಲಿಕಾವಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಕೋದಂಡರಾಮಪುರದ ನಿವಾಸಿಗಳಾದ ಅಭಿಲಾಷ್ (23) ಮತ್ತು ಗೋಪಿ (32) ಮೃತಪಟ್ಟವರು. ‘ಮೃತರಿಬ್ಬರೂ ಸ್ನೇಹಿತ ರಾಗಿದ್ದು, ಹೊಟ್ಟೆನೋವಿಗೆ ಮಾತ್ರೆ ಯೊಂದನ್ನು ಸೇವಿಸಿದ ಪರಿಣಾಮದಿಂದ ಸಾವಿಗೀಡಾಗಿದ್ದಾನೆ’ ಎಂದು ಪೊಲೀಸರು ತಿಳಿಸಿದರು. ವೈಯಾಲಿಕಾವಲ್ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ಉಪ ಮುಖ್ಯಮಂತ್ರಿ ಪ್ರತಿನಿಧಿ ಸುವ ಕ್ಷೇತ್ರದಲ್ಲೇ ಮಾದಕ ವಸ್ತು ಮಾರಾಟ ಅವ್ಯಾಹತವಾಗಿದೆ’ಎಂದು ಸ್ಥಳೀಯರು ಆರೋಪಿಸಿದ್ದಾರೆ. ಸ್ಥಳೀಯರ ಆರೋಪವನ್ನು ಪೊಲೀಸರು ನಿರಾಕರಿಸಿದ್ದಾರೆ.