ಬಾಗಲಕೋಟೆ : ತಾಲೂಕಿನ ರಬಕವಿ-ಬನಹಟ್ಟಿ ಚಿಮ್ಮಡ ಗ್ರಾಮದ ಹೊಸ ನ್ಯಾಯಬೆಲೆ ಅಂಗಡಿಗೆ ಮಂಜೂರಾತಿ ನೀಡಲು ಅರ್ಹ ಸಂಘ ಸಂಸ್ಥೆಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಸಂಘ ಸಂಸ್ಥೆಗಳು ಕನಿಷ್ಠ 3 ವರ್ಷದಿಂದ ಚಾಲನೆಯಲ್ಲಿದ್ದು, ಹಿಂದಿನ 2 ವರ್ಷಗಳಲ್ಲಿ ಕನಿಷ್ಠ 2 ಲಕ್ಷ ರೂ. ನಿರಂತರ ಬ್ಯಾಂಕ್ ಬ್ಯಾಲೆನ್ಸ್ ಹೊಂದಿರಬೇಕು.
ಸರಕಾರದ ಆದೇಶದನ್ವಯ ನೇರ ನೇಮಕಾತಿಗೆ ಅರ್ಹತೆ ಹೊಂದಿರುವವರು ನ್ಯಾಯಬೆಲೆ ಅಂಗಡಿ ಕೋರಿ ಅರ್ಜಿ ಸಲ್ಲಿಸಿದಲ್ಲಿ ಈ ಪ್ರಕಟಣೆ ರದ್ದಾಗುವುದು.
ಅರ್ಜಿ ನಮೂನೆ ಹಾಗೂ ಇತರೆ ಮಾಹಿತಿ ತಹಶೀಲ್ದಾರ ಕಾರ್ಯಾಲದಿಂದ ಪಡೆದು ಭರ್ತಿ ಮಾಡಿದ ಅರ್ಜಿಯನ ಜೊತೆ ಅಗತ್ಯ ದಾಖಲಾತಿಗಳೊಂದಿಗೆ ಸೆಪ್ಟೆಂಬರ 8 ರೊಳಗಾಗಿ ಸಲ್ಲಿಸುವಂತೆ ಆಹಾರ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.