ಧಾರವಾಡ, ಮೇ . 13 : ಗ್ರಾಮೀಣ ಗ್ರಾಮದಲ್ಲಿ ಮಹಾಮಾರಿ ಕೊರೋನಾ ಹರಡದಂತೆ ಮುಂಜಾಗ್ರತಾ ವಹಿಸಿದೆ ಎಂದು ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಶಾಸಕ ಅಮೃತ ದೇಸಾಯಿ ಮಚ್ಚುಗೆ ವ್ಯಕ್ತಪಡಿಸಿದರು.
ತಾಲ್ಲೂಕಿನ ಕೋಟಬಾಗಿ ಗ್ರಾಮದಲ್ಲಿ ಅಧಿಕಾರಿಗಳ ಸಭೆ ನಡೆಸಿ ಮಾತನಾಡಿದ ಅವರು, ಗ್ರಾಮೀಣ ಭಾಗದ ಪ್ರಾಥಮಿಕ ಆರೋಗ್ಯ ಕೇಂದ್ರ ವೈದ್ಯರು, ಸಿಬ್ಬಂದಿ, ಆಶಾ ಕಾರ್ಯಕರ್ತರು ಕೊರೋನಾ ಮುನ್ನಚ್ಚರಿಕೆ ಹಾಗೂ ತಡೆಗೆ ಜಾಗೃತಿಗೆ ಉತ್ತಮ ಕೆಲಸ ಮಾಡಿದ್ದಾರೆ ಎಂದು ಮುಕ್ತಕಂಠದಿಂದ ಪ್ರಸಂಶಿಸಿದರು.
ಈ ವೇಳೆ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿಗಳಿಗೆ ಮತ್ತು ಆಶಾ ಕಾರ್ಯಕರ್ತೆಯರ ರಕ್ಷಣೆ ಹಾಗು ಸಮಾಜದ ರಕ್ಷಣೆಗೆ ಮಾಸ್ಕ್ ಮತ್ತು ಸ್ಯಾನಿಟೈಸರ್ ನೀಡಿದರು. ತಮಗೆ ಯಾವುದೇ ತೊಂದರೆಗಳಿದ್ದರೆ, ವೈಯಕ್ತಿವಾಗಿ ತಿಳಿಸಿ ಅದನ್ನು ಬಗೆಹರಿಸುವುದಾಗಿ ಅಭಯ ನೀಡಿದರು.