ಡಿಕೆಶಿ ಬಳಿ ಆಶಾಕಾರ್ಯಕರ್ತೆಯರು ಕೇಳಿದ್ದೇನು?

ಡಿಕೆಶಿ ಬಳಿ ಆಶಾಕಾರ್ಯಕರ್ತೆಯರು ಕೇಳಿದ್ದೇನು?

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರ ಬಳಿ ಆಶಾಕಾರ್ಯಕರ್ತೆಯರು ತಮ್ಮ ಸಂಕಷ್ಟ ತೋಡಿಕೊಂಡರು.

ತಮ್ಮ ಬೇಡಿಕೆಗಳನ್ನು ಈಡೇರಿಸದ ಸರ್ಕಾರದ ವಿರುದ್ಧ ಆಶಾ ಕಾರ್ಯಕರ್ತೆಯರು ಬುಧವಾರ ಹೋರಾಟಕ್ಕೆ ಮುಂದಾಗಿದ್ದಾರೆ. ಆದ ಕಾರಣ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರ ಸದಾಶಿವನಗರ ನಿವಾಸಕ್ಕೆ ಭೇಟಿ ನೀಡಿ, ತಮ್ಮ ಸಂಕಷ್ಟ ನಿವೇದಿಸಿಕೊಂಡರು.

ಜತೆಗೆ ತಮ್ಮ ಹೋರಾಟಕ್ಕೆ ತಮ್ಮ ಸಹಕಾರ ನೀಡುವಂತೆ ಕೋರಿದರು. ಆಶಾ ಕಾರ್ಯಕರ್ತೆಯರ ಮನವಿಗೆ ಸ್ಪಂದಿಸಿದ ಡಿ.ಕೆ ಶಿವಕುಮಾರ್ ಅವರು ನಿಮಗೆ ಬೇಕಾದ ಎಲ್ಲ ಬೆಂಬಲ ನೀಡುವುದಾಗಿ ಭರವಸೆ ನೀಡಿದರು.

ಫ್ರೆಶ್ ನ್ಯೂಸ್

Latest Posts

Featured Videos