ಹೃದಯ ಇಲ್ಲದ ಡಿಕೆ ಸುರೇಶ್ ಕಾಣೆಯಾಗುತ್ತಾರೆ: ಅಶೋಕ್

ಹೃದಯ ಇಲ್ಲದ ಡಿಕೆ ಸುರೇಶ್ ಕಾಣೆಯಾಗುತ್ತಾರೆ: ಅಶೋಕ್

ಬೆಂಗಳೂರು: ರಾಜ್ಯದಲ್ಲಿ ಲೋಕಸಭಾ ಚುನಾವಣೆ ರಂಗೆರಿದ್ದು ರಾಜ್ಯದೆಲ್ಲಡೆ ಅಭ್ಯರ್ಥಿಗಳು ಭರ್ಜರಿ ಮತಯಾಚಿಸುತ್ತಿದ್ದಾರೆ. ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಡಾ. ಮಂಜುನಾಥ್ ಅವರು ಸ್ಪರ್ಧಿಸುತ್ತಿದ್ದಾರೆ ಅವರ ವಿರುದ್ಧವಾಗಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಡಿಕೆ ಸುರೇಶ್ ಅವರು ಸ್ಪರ್ಧಿಸುತ್ತಿದ್ದಾರೆ ಈ ಬಾರಿ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರ ಜಿದ್ದಾಜಿದ್ದಿಗೆ ಕಾರಣವಾಗಿದೆ.

ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರಕ್ಕೆ ಹೃದಯವಂತ ಡಾ. ಸಿಎನ್ ಮಂಜುನಾಥ್ ಬಂದಿದ್ದಾರೆ. ಹೃದಯ ಇಲ್ಲದ ಡಿಕೆ ಸುರೇಶ್ ಕಾಣೆಯಾಗುತ್ತಾರೆ. ಹೃದಯವಂತರು ಬಂದಿರುವುದರಿಂದ ಹೃದಯ ಇಲ್ಲದ ಕಟುಕರು ಕಾಣೆಯಾಗುತ್ತಾರೆ ಎಂದು ಪ್ರತಿಪಕ್ಷ ನಾಯಕ ಆರ್ ಅಶೋಕ ಟೀಕೆ ಮಾಡಿದರು. ಬೆಂಗಳೂರಿನಲ್ಲಿ ಬಿಜೆಪಿ ಮಾಧ್ಯಮ ಕೇಂದ್ರದಲ್ಲಿ ಮಾತನಾಡಿದ ಅವರು, ಭಾರತದ ನೈಜ ಹಿಟ್ಲರ್​ ಅಂದ್ರೆ ಅದು ಕಾಂಗ್ರೆಸ್ ಪಕ್ಷ. ಯಾವ ಕಾರಣಕ್ಕೆ ಮಾಜಿ ಪ್ರಧಾನಿ ದಿ. ಇಂದಿರಾ ಗಾಂಧಿ ತುರ್ತು ಪರಿಸ್ಥಿತಿ ಹೇರಿದ್ದರು? ಇವರು ಮೋದಿ ಅವರನ್ನು ಹಿಟ್ಲರ್, ಮುಸೋಲಿನಿ‌ ಅಂತ ಟೀಕಿಸುತ್ತಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಮೋದಿಯವರು ಈ ದೇಶದ ರಿಯಲ್ ಹೀರೋ. ಅವರ ಬಗ್ಗೆ ಕೀಳುಮಟ್ಟದ ಹೇಳಿಕೆ ನೀಡುವ ಕಾಂಗ್ರೆಸ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು ಕೊಡುತ್ತೇವೆ. ಮೋದಿ ಅವರನ್ನು ಸರ್ವಾಧಿಕಾರಿ ಅಂದಿದ್ದನ್ನು ನಾವು ಖಂಡಿಸುತ್ತೇವೆ ಎಂದು ಅಶೋಕ್ ಹೇಳಿದರು.

ದೇಶದಲ್ಲಿ ಸಂವಿಧಾನ ಬದಲಿಸಲು ಯಾರಿಂದಲೂ ಸಾಧ್ಯವಿಲ್ಲ ಅಂತ ಮೋದಿ ಹೇಳಿದ್ದಾರೆ. ಬಿಜೆಪಿಗೆ 400 ಸೀಟು ಬಂದರೆ ಸಂವಿಧಾನ ಬದಲಿಸುತ್ತಾರೆ ಅಂತ ಕಾಂಗ್ರೆಸ್ ಅಪಪ್ರಚಾರ ಮಾಡುತ್ತಿದೆ. ಸಂವಿಧಾನ ದೇಶದ ಪರಮೋಚ್ಛ. ಸಂವಿಧಾನದ ಮೇಲೆ ಕಾಂಗ್ರೆಸ್ ಪಕ್ಷದವರಿಗೆ ಗೌರವ ಇಲ್ಲ ಎಂದು ಅಶೋಕ್ ಹೇಳಿದ್ದಾರೆ.

 

ಫ್ರೆಶ್ ನ್ಯೂಸ್

Latest Posts

Featured Videos