ಬೆಂಗಳೂರು: ಈ ಬಾರಿಯ ಲೋಕಸಭಾ ಚುನಾವಣಾ ಕಾವು ಜೋರಾಗಿದ್ದು, 2019 ರ ಮಂಡ್ಯ ಚುನಾವಣೆಯಂತೆಯೇ ಈ ಬಾರಿಯೂ ಮಂಡ್ಯ ತೀವ್ರ ಜಿದ್ದಾಜಿದ್ದಿನ ಕ್ಷೇತ್ರವಾಗಲಿದೆ. ಕಾಂಗ್ರೆಸ್ ಗೆ ಠಕ್ಕರ್ ಕೊಡಲು ದೋಸ್ತಿಯಾಗಿದ್ದ ಬಿಜೆಪಿ-ಜೆಡಿಎಸ್ ನಡುವೆ ಆರಂಭದಲ್ಲೇ ಬಿರುಕು ಉಂಟಾಗಿದೆ. ಇತ್ತ ಮಂಡ್ಯ ಲೋಕಸಭಾ ಟಿಕೆಟ್ ಗಾಗಿ ತೀವ್ರ ಪೈಪೋಟಿ ಏರ್ಪಟ್ಟಿದೆ.
ಮಂಡ್ಯ ಲೋಕಸಭಾ ಕ್ಷೇತ್ರದಿಂದ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಸ್ಪರ್ಧೆ ಖಚಿತವಾಗಿದ್ದು ಇಂದು ಬಿಜೆಪಿ-ಜೆಡಿಎಸ್ ಸಮನ್ವಯ ಸಭೆ ನಡೆಯಿತು. ಸಭೆಯಲ್ಲಿ ಮಾತನಾಡಿದ ಮಾಜಿ ಸಚಿವ ಅಶ್ವಥ್ ನಾರಾಯಣ್,ಕಾಂಗ್ರೆಸ್ ನವರು ದುಡ್ಡು ಇರುವವರನ್ನ ಕರೆದುಕೊಂಡು ಬರುತ್ತಾರೆ. ನಮ್ಮ ಶತ್ರು ಯಾರು ಅಂದರೆ ಕಾಂಗ್ರೆಸ್. ಹೆಚ್.ಡಿ ಕುಮಾರಸ್ವಾಮಿಯನ್ನ ಗೆಲ್ಲಿಸಲು ಬಿಜೆಪಿ ಕಾರ್ಯಕರ್ತರು ಕೆಲಸ ಮಾಡಬೇಕು ಎಂದರು.
ಮಂಡ್ಯಕ್ಕೆ ಅದ್ಭುತ ನಾಯಕ ಬೇಕು. ಅದು ಕುಮಾರಣ್ಣ ಮಾತ್ರ. ಹೆಚ್.ಡಿ ಕುಮಾರಸ್ವಾಮಿ ಅವರನ್ನ ಗೆಲ್ಲಿಸುವಂತೆ ಶಾಸಕ ಸಿ.ಎನ್ ಅಶ್ವತ್ ನಾರಾಯಣ್ ಕರೆ ನೀಡಿದರು.
ಕುಮಾರಸ್ವಾಮಿ ವಿಜಯೇಂದ್ರ ಇಬ್ಬರನ್ನು ಅಣ್ಣ ತಮ್ಮನ ರೀತಿ ನೋಡಬೇಕು. ಕುಮಾರಸ್ವಾಮಿ ಕೇವಲ ಕೆಲವು ಭಾಗಕ್ಕೆ ಮಾತ್ರ ಸೀಮಿತವಲ್ಲ. 28 ಕ್ಷೇತ್ರಗಳನ್ನ ಗೆಲ್ಲಬೇಕು. ಹಾಗಾಗಿ ಎಲ್ಲಾ ಕ್ಷೇತ್ರಕ್ಕೂ ಹೋಗುತ್ತಾರೆ ಎಂದು ಅಶ್ವಥ್ ನಾರಾಯಣ್ ತಿಳಿಸಿದರು.