ಬೆಂಗಳೂರು, ಏ. 22, ನ್ಯೂಸ್ ಎಕ್ಸ್ ಪ್ರೆಸ್: ರಾಜಧಾನಿಯಲ್ಲಿ ಬೈಕ್ ಕಳ್ಳರು ಅಟ್ಟಹಾಸ ಮೆರೆದಿದ್ದು, ಬೈಕ್ ಕದಿಯುತ್ತಿದ್ದ ಮಾಹಿತಿ ಮೇಲೆ ಬಂಧನಕ್ಕೆ ತೆರಳಿದ್ದ ASI ಮೇಲೆಯೆ ದುಷ್ಕರ್ಮಿಗಳು ಹಲ್ಲೆ ನಡೆಸಿದ್ದಾರೆ. ಬೆಂಗಳೂರು-ಹೊಸೂರು ರಸ್ತೆಯ ಚಂದಾಪುರ ಬಳಿ ಅಪರಿಚಿತರು ಬೈಕ್ ಕದಿಯುತ್ತಿದ್ದ ಮಾಹಿತಿಯ ಆಧಾರದ ಮೇಲೆ ಸೂರ್ಯಸಿಟಿ ಪೊಲೀಸರು ಕಳ್ಳರ ಬಂಧನಕ್ಕೆ ತೆರಳಿದ್ದರು. ಈ ವೇಳೆ ಸೂರ್ಯಸಿಟಿ ಠಾಣೆಯ ASI ಶಿವಲಿಂಗ ನಾಯಕ್ ಮೇಲೆ ಬೈಕ್ ಕಳ್ಳರು ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದಾರೆ. ಕಳ್ಳರ ಹಲ್ಲೆಯಿಂದ ಗಾಯಗೊಂಡ ಎಎಸ್ಐಯನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಪ್ರಕರಣ ದಾಖಲಿಸಿಕೊಂಡ ಸೂರ್ಯಸಿಟಿ ಪೊಲೀಸರು ಆರೋಪಿಗಳಿಗಾಗಿ ಹುಡುಕಾಟ ನಡೆಸಿದ್ದಾರೆ. ಇನ್ನು ಕಳ್ಳರ 2 ಬೈಕ್ಗಳನ್ನ ವಶಕ್ಕೆ ಪಡೆದಿದ್ದಾರೆ. ಸ್ಥಳಕ್ಕೆ ಗ್ರಾಮಾಂತರ ಎಸ್ಪಿ ರಾಮ್ ನಿವಾಸ್ ಸಪೆಟ್ ಭೇಟಿ ನೀಡಿದ್ದು ಪರಿಶೀಲನೆ ನಡೆಸಿದ್ದಾರೆ.