ಮೈಸೂರು, ಅ. 8 : ನಾಡಹಬ್ಬ ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆ ಜಂಬೂ ಸವಾರಿ ಮೆರವಣಿಗೆ ಇಂದು ಸಂಜೆ ನಡೆಯಲಿದೆ. ಇದಕ್ಕಾಗಿ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ.
ಬಿಗಿ ಭದ್ರತೆಯನ್ನು ಕೂಡ ಮಾಡಲಾಗಿದ್ದು ಹದ್ದಿನ ಕಣ್ಣಿಡಲಾಗಿದೆ. ಅಂಬಾರಿಯಲ್ಲಿ ಆಸೀನಳಾಗಲು ಚಾಮುಂಡಿ ಬೆಟ್ಟದಿಂದ ದೇವಿಯ ಉತ್ಸವ ಮೂರ್ತಿಯನ್ನು ಸದ್ಯ ಅರಮನೆ ಆವರಣಕ್ಕೆ ತರಲಾಗಿದೆ. ಹಸಿರು – ಕೆಂಪು ಬಣ್ಣದ ಸೀರೆಯಲ್ಲಿ ತಾಯಿ ಚಾಮುಂಡೇಶ್ವರಿ ವೈಭವೋಪಾತವಾಗಿ ಕಂಗೊಳಿಸುತ್ತಿದ್ದಾಳೆ. ಕ್ಯಾಪ್ಟನ್ ಅರ್ಜುನನಿಗೆ ಚಿನ್ನದ ಅಂಬಾರಿ ಕಟ್ಟಿದ ಬಳಿಕ ವೈಭವೋಪೇತ ಜಂಬೂಸವಾರಿ ನಡೆಯಲಿದೆ.
ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಚಾಮುಂಡೇಶ್ವರಿ ತಾಯಿಗೆ ಪುಷ್ಪಾರ್ಚನೆ ಮಾಡುವ ಮೂಲಕ ಜಂಬೂ ಸವಾರಿ ಮೆರವಣಿಗೆಗೆ ಚಾಲನೆ ನೀಡಲಿದ್ದಾರೆ..