ಅಲಯನ್ಸ್ ವಿಶ್ವವಿದ್ಯಾಲಯದ ಕುಲಪತಿ ಹತ್ಯೆ

ಅಲಯನ್ಸ್ ವಿಶ್ವವಿದ್ಯಾಲಯದ ಕುಲಪತಿ ಹತ್ಯೆ

ಬೆಂಗಳೂರು, ಅ. 16 : ಅಲಯನ್ಸ್ ವಿಶ್ವವಿದ್ಯಾಲಯದ ಮಾಜಿ ಉಪ ಕುಲಪತಿ ಡಾ. ಅಯ್ಯಪ್ಪ ದೊರೆ ಹತ್ಯೆ ನಡೆದಿದೆ. ಆರ್. ಟಿ. ನಗರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ. ಬೆಂಗಳೂರಿನ ಆರ್. ಟಿ. ನಗರದಲ್ಲಿರುವ ನಿವಾಸದ ಬಳಿ ನೆನ್ನೆರಾತ್ರಿ ಅಯ್ಯಪ್ಪ ದೊರೆ ಹತ್ಯೆ ನಡೆದಿದೆ. ಘಟನೆ. ರಾತ್ರಿ ವಾಕಿಂಗ್ ಹೋಗಿದ್ದಾಗ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಮಾಡಿದ ದುಷ್ಕರ್ಮಿಗಳು.

ಆರ್. ಟಿ. ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ರಸ್ತೆಯಲ್ಲಿರುವ ಸಿಸಿಟಿವಿ ದೃಶ್ಯಾವಳಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ. ಹತ್ಯೆಗೆ ಕಾರಣ ಇನ್ನೂ ನಿಗೂಢವಾಗಿದೆ.

ಪ್ರತ್ಯೇಕ‌ ಲಿಂಗಾಯತ ಧರ್ಮಕ್ಕೆ ಹೋರಾಟದಲ್ಲಿ ಮುಂಚೂಣಿಯಲ್ಲಿದ್ದ ಅಯ್ಯಪ್ಪ ದೊರೆ. ಲಿಂಗಾಯತ ಧರ್ಮಕ್ಕೆ ಆಗ್ರಹಿಸಿ ಹೊರಾಟ ಮಾಡುತ್ತಿದ್ದ ಅಯ್ಯಪ್ಪ ದೊರೆ. ಜನಸಾಮಾನ್ಯರ ಪಕ್ಷ ಸ್ಥಾಪಿಸಿದ್ದ ಅಯ್ಯಪ್ಪ ದೊರೆ. ಅದಲ್ಲದೆ ಅಲಯನ್ಸ್ ಯೂನಿವರ್ಸಿಟಿಗೆ ಸೇರಿದ ಜಮೀನು ವಿವಾದವೂ ಸಹ ಇತ್ತು. ಈ ಎರಡೂ ಆಯಾಮಗಳಲ್ಲಿ ತನಿಖೆ ನಡೆಸಲು ಮುಂದಾಗಿರುವ ಪೊಲೀಸರು.

ಫ್ರೆಶ್ ನ್ಯೂಸ್

Latest Posts

Featured Videos