ಬೆಂಗಳೂರು: ಬೆಂಗಳೂರಿನಲ್ಲಿ ವಿಶ್ವಕಪ್ನ ಮೊದಲ ಪಂದ್ಯ ನಡೆಯುತ್ತಿರುವುದರಿಂದಾಗಿ ಇಡೀ ಕ್ರೀಡಾಂಗಣ ಭರ್ತಿಯಾಗುವ ಸಾಧ್ಯತೆ ಇದೆ. ಅಲ್ಲದೆ ಈಗಾಗಲೇ ಮೊದಲ ಪಂದ್ಯದ ಟಿಕೆಟ್ಗಳು ಸೋಲ್ಡ್ ಔಟ್ ಆಗಿವೆ. ಹೀಗಾಗಿ ಈ ಪಂದ್ಯದಲ್ಲಿ ಯಾವುದೇ ಅಹಿತಕರ ಘಟನೆಯಾಗದಂತೆ ತಡೆಯುವ ನಿಟ್ಟಿನಲ್ಲಿ ಬೆಂಗಳೂರು ಪೊಲೀಸರು ಕಾರ್ಯಪ್ರವೃತ್ತರಾಗಿದ್ದಾರೆ.
ಐಸಿಸಿ ವಿಶ್ವಕಪ್ 23 ರಂಗೇರಿದೆ ಭಾರತ ತಾನಾಡಿದ ಎಲ್ಲ ಪಂದ್ಯಗಳನ್ನು ಗೆದ್ದು ಪಾಯಿಂಟ್ಸ್ ಟೇಬಲ್ ನಲ್ಲಿ ಅಗ್ರಸ್ಥಾನದಲ್ಲಿದೆ. ಅಕ್ಟೋಬರ್ 20 ರಂದು ನಗರದ ಚಿನ್ನಸ್ವಾಮಿ ಸ್ಟೇಡಿಯಂಲ್ಲಿ ಪಾಕಿಸ್ತಾನ ಮತ್ತು ಆಸ್ಟ್ರೇಲಿಯ ನಡುವೆ ಪಂದ್ಯ ನಡೆಯಲಿದೆ. ಎರಡು ತಂಡಗಳಿಗೂ ಇದು ಮಹತ್ವದ ಪಂದ್ಯ.
ಆಡಿರುವ ಮೂರು ಪಂದ್ಯಗಳಲ್ಲಿ 1 ಸೋತು 2 ಗೆದ್ದಿರುವ ಪಾಕಿಸ್ತಾನದ ಬಳಿ 4 ಪಾಯಿಂಟ್ ಗಳಿದ್ದರೆ ಅಷ್ಟೇ ಪಂದ್ಯಗಳಲ್ಲಿ 2 ಸೋತು ಒಂದು ಗೆದ್ದಿರುವ 5 ಬಾರಿ ಚಾಂಪಿಯನ್ಸ್ ಕಾಂಗರೂಗಳು ಕೇವಲ 2 ಪಾಯಿಂಟ್ ಹೊಂದಿದ್ದಾರೆ. ಶುಕ್ರವಾರ ಪಂದ್ಯಕ್ಕಾಗಿ ಚಿನ್ನಸ್ವಾಮಿ ಸ್ಟೇಡಿಯಂಗೆ ಭಾರೀ ಭದ್ರತೆಯನ್ನು ಕಲ್ಪಿಸಲಾಗಿದೆ.