ಹೈದರಾಬಾದ್, ಮಾ.2, ನ್ಯೂಸ್ ಎಕ್ಸ್ ಪ್ರೆಸ್: ಭಾರತ ವಿರುದ್ಧ ಮೊದಲ ಏಕದಿನ ಕ್ರಿಕೆಟ್ ಪಂದ್ಯದಲ್ಲಿ ಟಾಸ್ ಜಯಿಸಿದ ಆಸ್ಟ್ರೇಲಿಯ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ.
ಭಾರತ ಕೆಎಲ್ ರಾಹುಲ್ರನ್ನು ಆಡುವ ಬಳಗದಿಂದ ಕೈಬಿಟ್ಟು ಅಂಬಟಿ ರಾಯುಡುವಿಗೆ ಅವಕಾಶ ನೀಡಿದೆ. ರೋಹಿತ್ ಶರ್ಮಾ ಹಾಗೂ ಶಿಖರ್ ಧವನ್ ಇನಿಂಗ್ಸ್ ಆರಂಭಿಸಲಿದ್ದಾರೆ. ಆಲ್ರೌಂಡರ್ಗಳಾದ ರವೀಂದ್ರ ಜಡೇಜ, ಕೇದಾರ್ ಜಾಧವ್ ಹಾಗೂ ವಿಜಯ ಶಂಕರ್ ಆಡುವ ಅವಕಾಶ ಪಡೆದಿದ್ದಾರೆ.
ಬೌಲಿಂಗ್ ವಿಭಾಗದಲ್ಲಿ ಯಜುವೇಂದ್ರ ಚಹಾಲ್ ಆಡುವ ಬಳಗದಿಂದ ಹೊರಗುಳಿದಿದ್ದು, ಕುಲದೀಪ್ ಯಾದವ್, ವೇಗಿಗಳಾದ ಮುಹಮ್ಮದ್ ಶಮಿ ಹಾಗೂ ಜಸ್ಪ್ರಿತ್ ಬುಮ್ರಾ ಇದ್ದಾರೆ.