ಚಿತ್ರದುರ್ಗ, ನ. 1 : 60 ವರ್ಷಗಳಿಂದ ಕಂಬಳಿ ನೇಕಾರಿಕೆ ಮಾಡುತ್ತಿರುವ ಚಳ್ಳಕೆರೆ ತಾಲೂಕಿನ ಗೊರ್ಲತ್ತು ಗ್ರಾಮದ ಗಂಗಮ್ಮ ವೀಲ್ ಚೇರ್ ನಲ್ಲಿ ಬಂದು ಪ್ರಶಸ್ತಿ ಸ್ವೀಕರಿಸಿದ ಅಜ್ಜಿ.
ಗೊರ್ಲತ್ತು ಗ್ರಾಮದ ಗಂಗಮ್ಮ ಕಾಲು ಮೂಳೆ ಮುರಿದು ಆಸ್ಪತ್ರೆ ಸೇರಿದ್ದ ಅಜ್ಜಿ ವೀಲ್ ಚೇರ್ ನಲ್ಲಿ ಬಂದು ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪ್ರಶಸ್ತಿ ಸ್ವೀಕರಿಸಿದ್ದಾರೆ. ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಆಯ್ಕೆ ಸಮಿತಿ ಅವರ ಸಾಧನೆ ಗಮನಿಸಿ ಅವರನ್ನು ಆಯ್ಕೆ ಮಾಡಿತ್ತು.
73 ವರ್ಷದ ಗಂಗಮ್ಮ ಕೆಲ ದಿನಗಳ ಹಿಂದೆ ಬಿದ್ದು ಕಾಲು ಮುರಿದುಕೊಂಡಿದ್ದರು. ಜಿಲ್ಲಾಸ್ಪತ್ರೆಯಿಂದ ಅಂಬ್ಯುಲೆನ್ಸ್ ಮೂಲಕ ಪೊಲೀಸ್ ಪೆರೇಡ್ ಮೈದಾನದಲ್ಲಿ ನಡೆಯುತ್ತಿದ್ದ ರಾಜ್ಯೋತ್ಸವ ಕಾರ್ಯಕ್ರಮಕ್ಕೆ ನೇರವಾಗಿ ಆಗಮಿಸಿ ಪ್ರಶಸ್ತಿ ಸ್ವೀಕರಿಸಿದ ಅಪರೂಪದ ಪ್ರಸಂಗ ಚಿತ್ರದುರ್ಗದಲ್ಲಿ ನಡೆಯಿತು.