ಲೋಕಸಭಾ ಚುನಾವಣೆ: ಮೈಸೂರಲ್ಲಿ ವಿನೂತನ ಮತದಾನ ಜಾಗೃತಿ

ಲೋಕಸಭಾ ಚುನಾವಣೆ: ಮೈಸೂರಲ್ಲಿ ವಿನೂತನ ಮತದಾನ ಜಾಗೃತಿ

ಮೈಸೂರು: ರಾಜ್ಯದಲ್ಲಿ ಲೋಕಸಭಾ ಚುನಾವಣೆಗೆ ಇನ್ನೇನು ಒಂದೇ ದಿನ ಬಾಕಿ ಉಳಿದಿದ್ದು ರಾಜ್ಯದಲ್ಲೇ ಅಭ್ಯರ್ಥಿಗಳು ಭರ್ಜರಿ ಪ್ರಚಾರ ಮಾಡಿದರು. ಮೈಸೂರು ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಯದುವೀರ್‌ ಒಡೆಯರ್‌ ಅವರು ಸ್ಪರ್ಧಿಸುತ್ತಿದ್ದಾರೆ, ಅವರ ವಿರುದ್ದವಾಗಿ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಲಕ್ಷಣ್‌ ಅವರು ಸ್ಪರ್ಧಿಸುತ್ತಿದ್ದಾರೆ.

ಲೋಕಸಭಾ ಚುನಾವಣೆಯ ಮೊದಲನೇ ಹಂತದ ಮತದಾನ ನಾಳೆ ನಡೆಯಲಿದೆ. ಕರ್ನಾಟಕದ 28 ಲೋಕಸಭಾ ಕ್ಷೇತ್ರಗಳ ಪೈಕಿ 14 ಕ್ಷೇತ್ರಗಳಲ್ಲಿ ಮತದಾನ ನಡೆಯಲಿದೆ. ಹೀಗಾಗಿ ಮೈಸೂರಿನಲ್ಲಿ ಮತದಾನ ಜಾಗೃತಿಗಾಗಿ ಚಿಕ್ಕ ಗಡಿಯಾರ ವೃತ್ತದ ಬಳಿ ವಿನೂತನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.

ಮೊದಲು ಮತದಾನ ಮಾಡಿದ 2000 ಜನರಿಗೆ ವಾಸವಿ ಸೇವಾ ಟ್ರಸ್ಟ್​​​​ನಿಂದ ಉಚಿತ ಪಡಿತರ ವಿತರಣೆ ಮಾಡಲಿದ್ದಾರೆ. ತಲಾ 1 ಕೆಜಿ ಗೋಧಿ ಹಿಟ್ಟು ವಿತರಣೆ ಮಾಡಲಿದ್ದು, ಆ ಮೂಲಕ ಹೆಚ್ಚು ಹೆಚ್ಚು ಜನ ಮತದಾನ ಮಾಡಲು ಪ್ರೋತ್ಸಾಹ ನೀಡಿದ್ದಾರೆ.

 

ಫ್ರೆಶ್ ನ್ಯೂಸ್

Latest Posts

Featured Videos