ಬೀದರ್ನಲ್ಲಿ ಅಜರುದ್ದೀನ್ ಕಣಕ್ಕಿಳಿಸಲು ಪ್ಲಾನ್

ಬೀದರ್ನಲ್ಲಿ ಅಜರುದ್ದೀನ್ ಕಣಕ್ಕಿಳಿಸಲು ಪ್ಲಾನ್

ಬೀದರ್, ಮಾ. 13, ನ್ಯೂಸ್ ಎಕ್ಸ್ ಪ್ರೆಸ್: ಏಪ್ರಿಲ್ ನಲ್ಲಿ ನಡೆಯಲಿರುವ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವು ಕ್ಷೇತ್ರವನ್ನು ಹೇಗಾದರೂ ಮಾಡಿ ತನ್ನ ತೆಕ್ಕೆಗೆ ತೆಗೆದುಕೊಳ್ಳಲು ತಂತ್ರ ಹೂಡುತ್ತಿದೆ.

ಕ್ರಿಕೆಟ್ ತಾರೆ ಮೊಹಮದ್ ಅಜರುದ್ದೀನ್ ಅವರನ್ನು ಕಣಕ್ಕಿಳಿಸಲು ಸಿದ್ಧತೆ ನಡೆಸುತ್ತಿರುವ ಬೆನ್ನಲ್ಲೇ ಸ್ಥಳೀಯ ಮುಖಂಡರು ವಿರೋಧ ವ್ಯಕ್ತವಾಗಿದೆ.

ಹೊರಗಿನವರ ಬೇಡಾ ಸ್ಥಳೀಯ ಅಲ್ಪಸಂಖ್ಯಾತ ಮುಖಂಡರಿಗೆ ಹೆಚ್ಚಿನ ಆದ್ಯತೆ ನೀಡಿ ಎಂದು ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಪಕ್ಷದ ವರಿಷ್ಠರಿಗೆ ಒತ್ತಡ ಹೇರಿದ್ದಾರೆ.

ಈ ಕ್ಷೇತ್ರದಲ್ಲಿ ಬಿಜೆಪಿ ಪ್ರಬಲವಾಗಿದ್ದು ಕಾಂಗ್ರೆಸ್ ಸಮರ್ಥ ಅಭ್ಯರ್ಥಿ ಹುಡುಕಾಟದಲ್ಲಿದೆ ಎನ್ನಲಾಗುತ್ತಿದೆ.

ಬಿಜೆಪಿ ಭಗವಂತ ಖೂಬಾ ಈ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದಾರೆ.

ಕಳೆದ 2 ದಿನಗಳ ಹಿಂದಷ್ಟೇ ಜನತೆ ಅಪೇಕ್ಷೆ ಪಟ್ಟರೆ, ಹೈಕಮಾಂಡ್ ತೀರ್ಮಾನ ಕೈಗೊಂಡರೆ ಬೀದರ್ ಕ್ಷೇತ್ರದಿಂದ ಸ್ಪರ್ಧಿಸಲು ನಾನು ಸಿದ್ಧ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಹೇಳಿದ್ದರು.

ಫ್ರೆಶ್ ನ್ಯೂಸ್

Latest Posts

Featured Videos