ಬೆಂಗಳೂರು, ಜು. 6 : ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಅವರು, 11 ಶಾಸಕರು ರಾಜೀನಾಮೆ ವಿಚಾರಕ್ಕೂ ನಮಗೂ ಯಾವುದೇ ರೀತಿಯ ಸಂಬಂಧವಿಲ್ಲ. ಸದ್ಯಕ್ಕೆ ನಾವು ಸರ್ಕಾರ ರಚೆನೆಗೂ ಕೈ ಹಾಕುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಮೈತ್ರಿ ಸರ್ಕಾರಕ್ಕೆ 11 ಶಾಸಕರು ಬಿಗ್ ಶಾಕ್ ನೀಡಿ, ರಾಜೀನಾಮೆ ಸಲ್ಲಿಸಿದ ಬಳಿಕ ಈ ವಿದ್ಯಾಮಾನಗಳ ಬಗ್ಗೆ ಮಾಧ್ಯಮಗಳಿಗೆ ಹೇಳಿಕೆ ನೀಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ, ಶಾಸಕರ ರಾಜೀನಾಮೆಗೂ ನಮಗೂ ಯಾವುದೇ ರೀತಿಯ ಸಂಬಂಧವಿಲ್ಲ ಎಂದು ಸ್ಪಷ್ಟ ಪಡಿಸಿದ್ದಾರೆ.
ಇನ್ನೂ ಮುಂದುವರೆದು ಮಾತನಾಡಿರುವ ಬಿಎಸ್ ಯಡಿಯೂರಪ್ಪ, ಮೈತ್ರಿ ಪಕ್ಷದ ಶಾಸಕರು ರಾಜೀನಾಮೆ ನೀಡಲಿ. ಆದರೇ ನಾವು ಮಾತ್ರ ಸದ್ಯಕ್ಕೆ ಸರ್ಕಾರ ರಚನೆ ಮಾಡುವುದಕ್ಕೆ ಕೈಹಾಕುವುದಿಲ್ಲ. ಗೊಂದಲದಿಂದ ರಾಜ್ಯದ ಅಭಿವೃದ್ಧಿ ಕುಂಠಿತವಾಗಿದೆ ಎಂದು ತಮ್ಮ ಅಸಮಾಧಾನವನ್ನು ಹೊರ ಹಾಕಿದ್ದಾರೆ.