ರಾಯಚೂರು, ಏ. 22 ನ್ಯೂಸ್ ಎಕ್ಸ್ ಪ್ರೆಸ್: ಲೋಕಸಭಾ ಚುನಾವಣೆಗೆ ನಾಳೆ ರಾಜ್ಯದಲ್ಲಿ 2ನೇ ಹಂತದ ಚುನಾವಣೆ ನಡೆಯಲಿದ್ದು, ನಗರದ ಜಿಲ್ಲಾ ಪಂಚಾಯತ್ ಸದಸ್ಯನ ಮನೆ ಮೇಲೆ ಐಟಿ ಇಲಾಖೆ ಮತ್ತು ಚುನಾವಣಾ ಅಧಿಕಾರಿಗಳು ಜಂಟಿ ದಾಳಿ ನಡೆಸಿದ್ದಾರೆ. ಲಿಂಗಸುಗೂರು ರಸ್ತೆಯಲ್ಲಿರುವ ಕೃಷ್ಣ ಮೇಡೌಸ್ ನಲ್ಲಿರುವ ಜಿಪಂ ಸದಸ್ಯ ಸಂದೀಪ್ ನಾಯಕ್ ಮನೆ ಮೇಲೆ ದಾಳಿ ನಡೆದಿದೆ. ಈತ ಮೈತ್ರಿ ಅಭ್ಯರ್ಥಿ ಬಿ.ವಿ.ನಾಯಕ್ ರ ಅಳಿಯ ಎನ್ನಲಾಗ್ತಿದೆ. 20 ವಾಹನಗಳಲ್ಲಿ ಬಂದ ಅಧಿಕಾರಿಗಳ ತಂಡ, ದಾಳಿ ವೇಳೆ ಸುಮಾರು 2 ಲಕ್ಷ ರೂ ಹಣವನ್ನು ಜಪ್ತಿ ಮಾಡಿದೆ.