ಬಿ.ವೈ.ರಾಘವೇಂದ್ರ ಪರ ಇಂದು ಅಮಿತ್ ಶಾ ಪ್ರಚಾರ

ಬಿ.ವೈ.ರಾಘವೇಂದ್ರ ಪರ ಇಂದು ಅಮಿತ್ ಶಾ ಪ್ರಚಾರ

ಹುಬ್ಬಳ್ಳಿ, . 20, ನ್ಯೂಸ್ ಎಕ್ಸ್ ಪ್ರೆಸ್: ಇಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರು ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ.ವೈ. ರಾಘವೇಂದ್ರ ಪರ ಶಿವಮೊಗ್ಗ ಮತ್ತು ಭದ್ರಾವತಿಯಲ್ಲಿ ಪ್ರಚಾರ ನಡೆಸಲಿದ್ದಾರೆ.

ಚುನಾವಣಾ ಪ್ರಚಾರಕ್ಕಾಗಿ ಅಮಿತ್ ಶಾ ಅವರು ಈಗಾಗಲೇ ಹುಬ್ಬಳ್ಳಿಗೆ ಬಂದಿದ್ದು, ಇಂದು ಬೆಳಗ್ಗೆ 9.15 ಕ್ಕೆ ಹೆಲಿಕಾಪ್ಟರ್ ಮೂಲಕ ಶಿವಮೊಗ್ಗ ಜಿಲ್ಲೆಗೆ ಪ್ರಯಾಣ ಬೆಳಸಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಬಿಜೆಪಿ ರಾಜ್ಯ ಉಸ್ತುವಾರಿ ಮುರಳೀಧರ್ ರಾವ್, ಬಿಜೆಪಿ ರಾಜ್ಯ ಉಪಾಧ್ಯಕ್ಷ ಮಾ. ನಾಗರಾಜ್ ವಿ.ಪ ಸದಸ್ಯ ಪ್ರದೀಪ್ ಶೆಟ್ಟರ್, ಮಾಜಿ ಶಾಸಕ ಎಸ್.ಐ. ಚಿಕ್ಕನಗೌಡರ್ ಹಾಗೂ ಬಿಜೆಪಿ ಮಹಿಳಾ ಘಟಕದ ಕಾರ್ಯಕರ್ತೆಯರು ಅಮಿತ್ ಶಾ ಅವರಿಗೆ ಸ್ವಾಗತ ಕೋರಿದರು.

ಫ್ರೆಶ್ ನ್ಯೂಸ್

Latest Posts

Featured Videos