ಹೊಟ್ಟೆಗೆ ಹಿಟ್ಟಿಲ್ಲ ಜುಟ್ಟಿಗೆ ಮಲ್ಲಿಗೆ ಹೂವು : ಬಿ.ವೈ ವಿಜಯೇಂದ್ರ

ಹೊಟ್ಟೆಗೆ ಹಿಟ್ಟಿಲ್ಲ ಜುಟ್ಟಿಗೆ ಮಲ್ಲಿಗೆ ಹೂವು : ಬಿ.ವೈ ವಿಜಯೇಂದ್ರ

ಬೆಂಗಳೂರು:ರಾಜ್ಯ ಬರಗಾಲದಿಂದ ಬಳಳುತ್ತಿದೆ ಇದಕ್ಕಿಂತ ನಿಮಗೆ ಶೃಂಗಾರ ಸಿರಿ ಹೆಚ್ಚಾಯಿತ್ತಾ  ಮುಖ್ಯಮಂತ್ರಿಗಳಿಗೆ ಶೃಂಗಾರ ಸಿರಿ ಬರಗಾಲದ ಜನರಿಗೆ ಸಂಕಟದ ಕಹಿ ಎಂದು ಬಿಜೆಪಿಯ ರಾಜ್ಯಾಧ್ಯಕ್ಷ  ಬಿ.ವೈ ವಿಜಯೇಂದ್ರ ಲೇವಡಿ ಮಾಡಿದ್ದಾರೆ.

ಜನ ಜಾನುವಾರುಗಳಿಗೆ ನೀರು, ಮೇವಿಗೆ ಆಹಾಕಾರ ಉಂಟಾಗಿ ನಾಡಿನೆಲ್ಲೆಡೆ ತೀವ್ರ ಬರ ಎದುರಿಸುತ್ತಿರುವ ಹೊತ್ತಲ್ಲಿ ತಮ್ಮ ಮನೆಯ ಶೃಂಗಾರಕ್ಕೆ ಬರೊಬ್ಬರಿ 9 ಕೋಟಿ ದುಂದು ವೆಚ್ಚ ಮಾಡುವ ಜರೂರು ಮುಖ್ಯಮಂತ್ರಿಗಳಿಗಿತ್ತೆ? ಎಂದು ಕಿಡಿಕಾರಿದ್ದಾರೆ.

ಹೀನಾಯ ಆರ್ಥಿಕ ಪರಿಸ್ಥಿತಿಯ ಕಾರಣಕ್ಕೆ ಅಭಿವೃದ್ಧಿ ಕಾರ್ಯಗಳು ನಿಂತ ನೀರಾಗಿದೆ, ಸಂಕಷ್ಟದ ಕಾಲದ ಪರಿಹಾರ ಕಾರ್ಯವೂ ಸ್ಥಗಿತಗೊಂಡಿದೆ, ಇಂಥಾ ಪರಿಸ್ಥಿತಿಯಲ್ಲೂ ಮನೆ ಶೃಂಗಾರದ ಆದ್ಯತೆ ಪಡೆದು 9 ಕೋಟಿ ನುಂಗಿದರೆ “ಹೊಟ್ಟೆಗೆ ಹಿಟ್ಟಿಲ್ಲ ಜುಟ್ಟಿಗೆ ಮಲ್ಲಿಗೆ ಹೂವು”..ಎಂಬ ಗಾದೆ ಮಾತು ನೆನಪಿಗೆ ಬರುತ್ತದೆ  ಎಂದು ಲೇವಾಡಿ ಮಾಡಿದ್ದಾರೆ.

ಫ್ರೆಶ್ ನ್ಯೂಸ್

Latest Posts

Featured Videos