ಸಾಂಸ್ಕೃತಿಕ ನಗರಿ ಮೈಸೂರಿಗೆ ಎಂಟ್ರಿ ಕೊಟ್ಟ ಬಿ.ವೈ.ವಿಜಯೇಂದ್ರ

ಸಾಂಸ್ಕೃತಿಕ ನಗರಿ ಮೈಸೂರಿಗೆ ಎಂಟ್ರಿ ಕೊಟ್ಟ ಬಿ.ವೈ.ವಿಜಯೇಂದ್ರ

ಮೈಸೂರು: ಲೋಕಸಭೆ ಚುನಾವಣೆಯ ಕಣ ರಂಗೇರಿದ್ದು ಸಾಂಸ್ಕೃತಿ ಕನಗರಿ ಮೈಸೂರಿಗೆ  ಇಂದು ರಾಜಕೀಯ ನಾಯಕರ ದಂಡೇ ಆಗಮಿಸುತ್ತಿದ್ದು, ಕಾಂಗ್ರೆಸ್, ಜೆಡಿಎಸ್, ಬಿಜೆಪಿಯ ಸಾಲು ಸಾಲು ಪ್ರಮುಖ ನಾಯಕರು ಭೇಟಿ ನೀಡುತ್ತಿದ್ದಾರೆ.

ಮೈಸೂರು- ಕೊಡಗು ಲೋಕಸಭಾ ಕ್ಷೇತ್ರದ ಅಖಾಡ ರಂಗೇರಿದ್ದು, ಸಿದ್ದರಾಮಯ್ಯ ತವರಿಗೆ ಬಿ.ವೈ.ವಿಜಯೇಂದ್ರ ಎಂಟ್ರಿ ಕೊಟ್ಟಿದ್ದಾರೆ. ಇಂದು ಚಾಮುಂಡಿಬೆಟ್ಟಕ್ಕೆ ಆಗಮಿಸಿ ನಾಡ ದೇವತೆ ತಾಯಿ ಚಾಮುಂಡೇಶ್ವರಿ ದರ್ಶನ ಮಾಡಿ ವಿಶೇಷ ಪೂಜೆ ಸಲ್ಲಿಸಿದರು.

ಬಳಿಕ ಗೋಪೂಜೆ ಮಾಡುವ ಮೂಲಕ ಪ್ರಚಾರಕ್ಕೆ ಬಿ.ವೈ ವಿಜಯೇಂದ್ರ ಚಾಲನೆ ನೀಡಿದರು. ಇನ್ನು ಇದೇ ವೇಳೆ ವಿಜಯೇಂದ್ರರಿಗೆ ಬಿಜೆಪಿ ಕಾರ್ಯಕರ್ತರು ಅದ್ದೂರಿಯಾಗಿ ಸ್ವಾಗತ ಕೋರಿದರು. ಈ ವೇಳೆ ನಗರಾಧ್ಯಕ್ಷ ಎಲ್.ನಾಗೇಂದ್ರ, ಚಾಮರಾಜನಗರ ಅಭ್ಯರ್ಥಿ ಎಸ್.ಬಾಲರಾಜು, ರಾಜ್ಯ ಉಪಾಧ್ಯಕ್ಷ ಎಂ.ರಾಜೇಂದ್ರ ಸೇರಿದಂತೆ ಇತರರು ಭಾಗಿಯಾಗಿದ್ದರು.

ಫ್ರೆಶ್ ನ್ಯೂಸ್

Latest Posts

Featured Videos