ಬೈಂದೂರಿನ ನಕ್ಸಲ್ ಪೀಡಿತ ಪ್ರದೇಶಗಳಲ್ಲಿ ಬಿರುಸಿನ ಮತದಾನ

ಬೈಂದೂರಿನ ನಕ್ಸಲ್ ಪೀಡಿತ ಪ್ರದೇಶಗಳಲ್ಲಿ ಬಿರುಸಿನ ಮತದಾನ

ಉಡುಪಿ, . 23, ನ್ಯೂಸ್ ಎಕ್ಸ್ ಪ್ರೆಸ್: ದೇಶದಲ್ಲಿ  ಇಂದು 3ನೇ ಹಂತದ ಮತದಾನ ಪ್ರಕ್ರಿಯೆ ನಡೆಯುತ್ತಿದೆ. ರಾಜ್ಯದಲ್ಲಿ ಒಟ್ಟು 14 ಕ್ಷೇತ್ರದಲ್ಲಿ ಇಂದು ಮುಂಜಾನೆಯಿಂದಲೇ ಮತದಾನ ಪ್ರಕ್ರಿಯೆ ಆರಂಭಗೊಂಡಿದೆ. ಶಿವಮೊಗ್ಗ ಲೋಕಸಭೆ ಕ್ಷೇತ್ರಕ್ಕೆ ಒಳಪಟ್ಟ ಉಡುಪಿ ಜಿಲ್ಲೆಯ ಬೈಂದೂರು ವಿಧಾನಸಭೆ ಕ್ಷೇತ್ರದಲ್ಲಿ ಮುಂಜಾನೆಯಿಂದ ಬಿರುಸಿನ ಮತದಾನ ನಡೆಯುತ್ತಿದೆ.

ಬೈಂದೂರು ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಗೆ ಬರುವ ನಕ್ಸಲ್ ಪೀಡಿತ ಪ್ರದೇಶಗಳಾದ ಯಡಮೊಗ್ಗೆ ,ಮಚ್ಚೆಟ್ಟು ,ತೊಂಬಟ್ಟುವಿನ ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಮತದಾನಕ್ಕೆ ಮುಂದಾಗುತ್ತಿದ್ದಾರೆ.

ಗ್ರಾಮಸ್ಥರು ಬೆಳಿಗ್ಗೆಯಿಂದಲೇ ಮತಗಟ್ಟೆಗಳಿಗೆ ತೆರಳಿ ಮತದಾನ ಮಾಡುತ್ತಿರುವ ದೃಶ್ಯ ಸಾಮಾನ್ಯವಾಗಿದೆ. ನಕ್ಸಲ್ ಪೀಡಿತ ಪ್ರದೇಶಗಳಲ್ಲಿ ಮತದಾನ ನಡೆಯುತ್ತಿರುವ ಹಿನ್ನೆಲೆಯಲ್ಲಿ ಮತಗಟ್ಟೆಗಳ ಸುತ್ತ ಬಿಗಿ ಪೋಲಿಸ್ ಬಂದೋಬಸ್ತ್ ಮಾಡಲಾಗಿದೆ.

 

ಫ್ರೆಶ್ ನ್ಯೂಸ್

Latest Posts

Featured Videos