ಬಾಲಕನ ಮೇಲೆ ಲೈಂಗಿಕ ಕಿರುಕುಳ

ಬಾಲಕನ ಮೇಲೆ ಲೈಂಗಿಕ ಕಿರುಕುಳ

ಮಾ. 5, ನ್ಯೂಸ್ ಎಕ್ಸ್ ಪ್ರೆಸ್, ಮಂಗಳೂರು: ಸೈಕಲ್ ರಿಪೇರಿ ಮಾಡಿಸಲು ಬಂದ ಬಾಲಕನ ಮೇಲೆ ಲೈಂಗಿಕ ಕಿರುಕುಳ ನಡೆಸಲು ಪ್ರಯತ್ನಿಸಿದ ವ್ಯಕ್ತಿಯನ್ನು ಬಂಟ್ವಾಳ ಪೊಲೀಸರು ಬಂಧಿಸಿದ್ದಾರೆ. ಬಂಟ್ವಾಳದ ಪಿಲಾತಬೆಟ್ಟು ನಿವಾಸಿ ರಮಾನಂದ ಶೆಣೈ ಬಂಧಿತ ಆರೋಪಿ ಎಂದು ಗುರುತಿಸಲಾಗಿದೆ.

ಬಂಟ್ವಾಳ ತಾಲೂಕು ಪಿಲಾತಬೆಟ್ಟು ಗ್ರಾಮದ ನಯನಾಡು ಎಂಬಲ್ಲಿ ರಮಾನಂದ ಶೆಣೈ ಅವರ ಸೈಕಲ್ ರಿಪೇರಿ ಅಂಗಡಿಯೊಂದಕ್ಕೆ ಬಾಲಕನೋಬ್ಬ ತನ್ನ ಸೈಕಲ್ ರಿಪೇರಿ ಮಾಡಿಸಲು ಬಂದಿದ್ದ.

ಈ ಸಂದರ್ಭದಲ್ಲಿ ಆರೋಪಿ ರಮಾನಂದ ಶೆಣೈ “ನೀನು ಊಟ ಮಾಡಿದ್ದೀಯಾ?, ನನ್ನ ಮನೆಗೆ ಹೋಗೊಣ ಬಾ ಅಲ್ಲಿ ನೀನಗೆ ಊಟ  ಕೋಡುತ್ತೆನೆ ಎಂದು ಕರೆದುಕೊಂಡು ಹೋಗಿದ್ದ. ನಾನೂ ಊಟ ಮಾಡಲಿಲ್ಲ. ನಾವಿಬ್ಬರೂ ನಮ್ಮ ಮನೆಗೆ ಹೋಗಿ ಊಟ ಮಾಡೋಣ ಎಂದು ಪುಸಲಾಯಿಸಿ ಮನೆಗೆ ಕರೆದುಕೊಂಡು ಹೋಗಿದ್ದ ಎಂದು ಆರೋಪಿಸಲಾಗಿದೆ.

ಮನೆಯಲ್ಲಿ ಯಾರೂ ಇಲ್ಲದ ವೇಳೆ ಬಾಲಕನನ್ನು ಬಲಾತ್ಕಾರವಾಗಿ ಲೈಂಗಿಕ ಕಿರುಕುಳಕ್ಕೆ ಪ್ರಯತ್ನಿಸಿದ್ದ ಎಂದು ಹೇಳಲಾಗಿದ್ದು, ಆ ಸಂದರ್ಭದಲ್ಲಿ ಬಾಲಕ ಆರೋಪಿ ರಮಾನಂದ ಶೆಣೈ ಅವರ ಹೊಟ್ಟೆಗೆ ಕಾಲಿನಿಂದ ತುಳಿದು ತಪ್ಪಿಸಿಕೊಂಡು ಅಲ್ಲಿಂದ ಒಡಿ ಹೋಗಿದ್ದಾನೆ.

ಆದರೆ ಬಾಲಕನನ್ನು ಹಿಂಬಾಲಿಸಿಕೊಂಡು ಬಂದು ಆರೋಪಿ ಎಳೆದು ನಿಲ್ಲಿಸಿ ಈ ವಿಚಾರವನ್ನು ಯಾರಿಗಾದರೂ ಹೇಳಿದರೆ ಸಾಯಿಸುವುದಾಗಿ ಹೋದರಿಕೆ ಹಾಕಿದ್ದ ಎಂದು ಆರೋಪಿಸಲಾಗಿದೆ.ಈ ಕುರಿತು ಪುಂಜಲಕಟ್ಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ಪೊಲೀಸರು ತನಿಖೆ ನಡೆಸಿ ಆರೋಪಿ ರಮಾನಂದ ಶೆಣೈ ಅವರನ್ನು ಬಂಧಿಸಿದ್ದಾರೆ ಎಂದು ತಿಳಿದು ಬಂದಿದೆ.

ಫ್ರೆಶ್ ನ್ಯೂಸ್

Latest Posts

Featured Videos