ಬಾಲಕಿ ಮೂಲಕ ಪತ್ರ ಓದಿಸಿ ವಿಡಿಯೋ

ಬಾಲಕಿ ಮೂಲಕ ಪತ್ರ ಓದಿಸಿ ವಿಡಿಯೋ

ಬೆಂಗಳೂರು, ಅ.22 : ಯಾರೋ ಬಾಲಕಿ ಮೂಲಕ ಪತ್ರ ಓದಿಸಿ ವಿಡಿಯೋ ಚಿತ್ರೀಕರಿಸಿದ್ದಾರೆ. ಯಾವುದೇ ರೀತಿಯ ಪ್ರವಾಹ ಉಂಟಾಗಿಲ್ಲ. ರಸ್ತೆಯಲ್ಲಿ ನೀರು ನಿಂತಿದೆಯಷ್ಟೇ ಎಂದು ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಸ್ಪಷ್ಟಪಡಿಸಿದ್ದಾರೆ.
ಸಂತ್ರಸ್ತ ಬಾಲಕಿ ಪತ್ರ ಓದುವ ಮೂಲಕ ಪರಿಹಾರಕ್ಕೆ ಮನವಿ ಮಾಡಿದ ಕುರಿತು ಪ್ರತಿಕ್ರಿಯಿಸಿದ ಅವರು, ಮುಧೋಳ ತಾಲೂಕಿನ ರನ್ನ ಬೆಳಗಲಿ ಪ್ರವಾಹಕ್ಕೆ ಒಳಗಾಗಿಲ್ಲ, ಅದು ಕೋಡಿಹಾಳ ರಸ್ತೆ ರೈತರ ಹೊಲಗಳಿಗೆ ಹಾಗೂ ಸಣ್ಣ ಜನ ವಸತಿ ಇರುವ ಜಾಗಕ್ಕೆ ಹೋಗುವ ರಸ್ತೆ. ಅಲ್ಲಿ ಕೇವಲ ಮಳೆ ನೀರು ನಿಂತಿದೆ, ಪ್ರವಾಹ ಉಂಟಾಗಿಲ್ಲ. ಯಾರೋ ಒಬ್ಬರು ಈ ಪತ್ರವನ್ನು ಮಗುವಿನ ಕಡೆಯಿಂದ ಓದಿಸಿದ್ದಾರೆ. ಅಲ್ಲದೆ ಅದು ಪಿಡಬ್ಲ್ಯೂಡಿ ರಸ್ತೆಯಲ್ಲ ಪಟ್ಟಣ ಪಂಚಾಯಿತಿಗೆ ಸೇರಿದ ರಸ್ತೆ. ನಾನು ನಾಳೆ ಕ್ಷೇತ್ರಕ್ಕೆ ಹೊರಟಿದ್ದೇನೆ. ನೀವು ಬರುವುದಾದರೆ ಬೆಳಗಲಿಗೇ ಬನ್ನಿ. ನೀವೇ ಬಂದು ಬೆಳಗಲಿಯಲ್ಲಿ ನೋಡಿ, ಅಲ್ಲಿ ಸಮಸ್ಯೆ ಆಗಿಲ್ಲ ಎಂದರು.

ಫ್ರೆಶ್ ನ್ಯೂಸ್

Latest Posts

Featured Videos