ನವದೆಹಲಿ, ಜೂನ್. 7, ನ್ಯೂಸ್ ಎಕ್ಸ್ ಪ್ರೆಸ್ : ಮಾಜಿ ಸಚಿವ ಜನಾರ್ದನ ರೆಡ್ಡಿ ಅವರಿಗೆ ಜೂನ್ 8 ರಿಂದ 2 ವಾರಗಳ ಕಾಲ ಬಳ್ಳಾರಿ ಜಿಲ್ಲೆಗೆ ತೆರಳಲು ಸುಪ್ರೀಂ ಕೋರ್ಟ್ ರಜಾ ಕಾಲದ ಪೀಠ ಅನುಮತಿ ನೀಡಿದೆ.
ಅಕ್ರಮ ಗಣಿಗಾರಿಕೆ ಪ್ರಕರಣ ಕ್ಕೆ ಸಂಬಂಧಿಸಿ ಸಿಬಿಐ ವಿಶೇಷ ಕೋರ್ಟ್ ಬಳ್ಳಾರಿ ಪ್ರವೇಶಕ್ಕೆ ನಿರ್ಬಂಧ ವಿಧಿಸಿತ್ತು. ಹಲವು ಬಾರಿ ಕೋರ್ಟ್ ಅವಕಾಶ ಕೇಳಿ ಸಲ್ಲಿಸಿದ್ದ ಮನವಿಯನ್ನು ತಳ್ಳಿ ಹಾಕಿತ್ತು. ಜನಾರ್ದನ ರೆಡ್ಡಿ ನಿಷೇಧದ ಕಾರಣದಿಂದಾಗಿ ಮತದಾನ ಮಾಡಲೂ ಸಾಧ್ಯವಾಗಿರಲಿಲ್ಲ.