ಬೆಂಗಳೂರು, ಏ. 5, ನ್ಯೂಸ್ ಎಕ್ಸ್ ಪ್ರೆಸ್: ಬೆಂಗಳೂರಿನಲ್ಲಿ ನಿರ್ಮಾಣ ಹಂತದಲ್ಲಿರುವ ಕಟ್ಟಡ ಕುಸಿದು 2 ಮೃತಪಟ್ಟಿರುವ ಘಟನೆ ಇಂದು ಯಶವಂತಪುರ ಎಪಿಎಂಸಿ ಯಾರ್ಡ್ನಲ್ಲಿ ನಡೆದಿದೆ.
ಪಾರ್ಕಿಂಗ್ ಗಾಗಿ 2 ಅಂತಸ್ತಿನ ಕಟ್ಟಡ ನಿರ್ಮಿಸಲಾಗುತ್ತಿತ್ತು. ರಾಕೇಶ್ ಹಾಗೂ ರಾಹುಲ್ ಮೃತ ದುರ್ದೈವಿಗಳಾಗಿದ್ದಾರೆ.
ಬೆಳಗಿನ ಜಾವ ಸುಮಾರು 4.30ರ ವೇಳೆಗೆ ಕಟ್ಟಡ ಕುಸಿತ ಸಂಭವಿಸಿದೆ. ಸುಮಾರು 50ಕ್ಕೂ ಹೆಚ್ಚು ಜನ ಕಾರ್ಮಿಕರು ಕಟ್ಟಡದೊಳಗಿದ್ದರು.
ಮೌಲ್ಡಿಂಗ್ ಕೆಲಸ ನಡೆಯುತ್ತಿತ್ತು. ಮಣ್ಣು ಕುಸಿತವೇ ಅವಘಡಕ್ಕೆ ಕಾರಣ ಎನ್ನಲಾಗುತ್ತಿದೆ. 4 ಜನರಿಗೆ ಘಟನೆಯಲ್ಲಿ ಗಂಭೀರ ಗಾಯಗಳಾಗಿವೆ. ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.