ಬೆಂಗಳೂರು, ಏ. 23, ನ್ಯೂಸ್ ಎಕ್ಸ್ ಪ್ರೆಸ್: ನೂರಾರು ಜನರು ರೈಲಿಗಾಗಿ ಕಾದು ನಿಂತಿದ್ದರು. ಈ ವೇಳೆ ನಿಲ್ದಾಣದಲ್ಲಿ ಮೋದಿ ಪರ ಘೋಷಣೆ ಕೇಳಿಬಂದಿದೆ. ಬಿಜೆಪಿ ಪರ ಬಾವುಟ ಕೂಡ ಹಾರಾಡಿದೆ.
2014ರ ಲೋಕಸಭಾ ಚುನಾವಣೆ ವೇಳೆ ಪ್ರಧಾನಿ ನರೇಂದ್ರ ಮೋದಿ ಅಲೆ ಜೋರಾಗಿತ್ತು. ಇದೇ ಕಾರಣಕ್ಕೆ ಭಾರೀ ಬಹುಮತದೊಂದಿಗೆ ಬಿಜೆಪಿ ಅಧಿಕಾರಕ್ಕೆ ಬಂದಿತ್ತು. 2019ರ ಲೋಕಸಭಾ ಚುನಾವಣೆಯಲ್ಲೂ ಮೋದಿ ಅವರ ಅಲೆ ಜೋರಾಗಿಯೇ ಇದೆ. ಯಶವಂತಪುರ ರೈಲ್ವೆ ನಿಲ್ದಾಣದಲ್ಲಿ ನಡೆದ ಘಟನೆ ಇದಕ್ಕೆ ಪುಷ್ಠಿ ನೀಡಿದೆ.
ಕರ್ನಾಟಕದ 28 ಕ್ಷೇತ್ರಗಳ ಪೈಕಿ 14 ಕ್ಷೇತ್ರಗಳಿಗೆ ಏ. 18ರಂದು ಮತದಾನ ನಡೆದಿತ್ತು. ಉಳಿದ 14 ಕ್ಷೇತ್ರಗಳಿಗೆ ಇಂದು ಮತದಾನ ನಡೆಯುತ್ತಿದೆ. ಹಾಗಾಗಿ ಬೆಂಗಳೂರಿನಲ್ಲಿ ಉಳಿದುಕೊಂಡಿರುವ ಬೇರೆ ಬೇರೆ ಪ್ರದೇಶದ ಜನರು ಮತಚಲಾಯಿಸಲು ಊರಿಗೆ ಹೊರಟಿದ್ದರು.
ಬೆಂಗಳೂರಿನ ರೈಲ್ವೆ ನಿಲ್ದಾಣ, ಬಸ್ ನಿಲ್ದಾಣ ಜನ ಜಂಗುಳಿಯಿಂದ ತುಂಬಿತ್ತು. ಯಶ್ವಂತಪುರ ರೈಲ್ವೆ ನಿಲ್ದಾಣ ಕೂಡ ಇದಕ್ಕೆ ಹೊರತಾಗಿರಲಿಲ್ಲ. ನೂರಾರು ಜನರು ರೈಲಿಗಾಗಿ ಕಾದು ನಿಂತಿದ್ದರು. ಈ ವೇಳೆ ನಿಲ್ದಾಣದಲ್ಲಿ ಮೋದಿ ಪರ ಘೋಷಣೆ ಕೇಳಿಬಂದಿದೆ.