ಬೆಂಗಳೂರು ಕೇಂದ್ರ ಕ್ಷೇತ್ರದಲ್ಲಿ `ಬಿಜೆಪಿ’ ಅಭ್ಯರ್ಥಿ ಪರ ದರ್ಶನ್ ಪ್ರಚಾರ

ಬೆಂಗಳೂರು ಕೇಂದ್ರ ಕ್ಷೇತ್ರದಲ್ಲಿ `ಬಿಜೆಪಿ’ ಅಭ್ಯರ್ಥಿ ಪರ ದರ್ಶನ್ ಪ್ರಚಾರ

ಬೆಂಗಳೂರು, . 8, ನ್ಯೂಸ್ ಎಕ್ಸ್ ಪ್ರೆಸ್: ಬೆಂಗಳೂರು ಕೇಂದ್ರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪಿ.ಸಿ.ಮೋಹನ್ ರವರ ಪರ ಭರ್ಜರಿ ಪ್ರಚಾರ ನಡೆಸಲು ನಟ ದರ್ಶನ್ ಮುಂದಾಗಿದ್ದಾರೆ.

ಈ ಬಾರಿ ಸುಮಲತಾ ಅಂಬರೀಶ್ ಪರ ಪ್ರಚಾರದಲ್ಲಿ ತೊಡಗಿರುವ ದರ್ಶನ್ ಸುಮಲತಾ ದೊಡ್ಡ ಮಗನಂತೆ ಬಿಡುವಿಲ್ಲದ ಪ್ರಚಾರ ನಡೆಸುತ್ತಿದ್ದಾರೆ. ಇದರ ಮಧ್ಯೆಯೇ ಅವರು ಇಂದು ತಮ್ಮ ಗೆಳೆಯ ಪಿ.ಸಿ.ಮೋಹನ್ ಪರ ಪ್ರಚಾರ ನಡೆಸಲಿದ್ದಾರೆ ಎನ್ನಲಾಗಿದೆ.

ಯುಗಾದಿ ಹಬ್ಬದ ಪ್ರಯುಕ್ತ ಮಂಡ್ಯಯ ಚುಣಾವಣಾ ಪ್ರಚಾರಕ್ಕೆ 3 ದಿನಗಳ ಬ್ರೇಕ್ ನೀಡಿದ್ದ ದರ್ಶನ್, ಇಂದು ಬೆಂಗಳೂರಿನಲ್ಲಿ ಪ್ರಚಾರ ನಡೆಸಲಿದ್ದಾರೆ. ಈ ಹಿಂದೆ ಪಿ.ಸಿ. ಮೋಹನ್ ಪರ ದರ್ಶನ್ ಪ್ರಚಾರ ನಡೆಸಿದ್ದರು. ಮೋಹನ್ ಅವರೊಂದಿಗೆ ಉತ್ತಮ ಸಂಬಂಧ ಹೊಂದಿರುವ ದರ್ಶನ್ ಇಂದು ಬೆಳಗ್ಗೆ 10.30 ರಿಂದ ತಿಪ್ಪಸಂದ್ರದಲ್ಲಿ ಪ್ರಚಾರ ಆರಂಭಿಸಲಿದ್ದಾರೆ.

ಫ್ರೆಶ್ ನ್ಯೂಸ್

Latest Posts

Featured Videos