ಬೆಂಗಳೂರು, ಏ. 8, ನ್ಯೂಸ್ ಎಕ್ಸ್ ಪ್ರೆಸ್: ಬೆಂಗಳೂರು ಕೇಂದ್ರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪಿ.ಸಿ.ಮೋಹನ್ ರವರ ಪರ ಭರ್ಜರಿ ಪ್ರಚಾರ ನಡೆಸಲು ನಟ ದರ್ಶನ್ ಮುಂದಾಗಿದ್ದಾರೆ.
ಈ ಬಾರಿ ಸುಮಲತಾ ಅಂಬರೀಶ್ ಪರ ಪ್ರಚಾರದಲ್ಲಿ ತೊಡಗಿರುವ ದರ್ಶನ್ ಸುಮಲತಾ ದೊಡ್ಡ ಮಗನಂತೆ ಬಿಡುವಿಲ್ಲದ ಪ್ರಚಾರ ನಡೆಸುತ್ತಿದ್ದಾರೆ. ಇದರ ಮಧ್ಯೆಯೇ ಅವರು ಇಂದು ತಮ್ಮ ಗೆಳೆಯ ಪಿ.ಸಿ.ಮೋಹನ್ ಪರ ಪ್ರಚಾರ ನಡೆಸಲಿದ್ದಾರೆ ಎನ್ನಲಾಗಿದೆ.
ಯುಗಾದಿ ಹಬ್ಬದ ಪ್ರಯುಕ್ತ ಮಂಡ್ಯಯ ಚುಣಾವಣಾ ಪ್ರಚಾರಕ್ಕೆ 3 ದಿನಗಳ ಬ್ರೇಕ್ ನೀಡಿದ್ದ ದರ್ಶನ್, ಇಂದು ಬೆಂಗಳೂರಿನಲ್ಲಿ ಪ್ರಚಾರ ನಡೆಸಲಿದ್ದಾರೆ. ಈ ಹಿಂದೆ ಪಿ.ಸಿ. ಮೋಹನ್ ಪರ ದರ್ಶನ್ ಪ್ರಚಾರ ನಡೆಸಿದ್ದರು. ಮೋಹನ್ ಅವರೊಂದಿಗೆ ಉತ್ತಮ ಸಂಬಂಧ ಹೊಂದಿರುವ ದರ್ಶನ್ ಇಂದು ಬೆಳಗ್ಗೆ 10.30 ರಿಂದ ತಿಪ್ಪಸಂದ್ರದಲ್ಲಿ ಪ್ರಚಾರ ಆರಂಭಿಸಲಿದ್ದಾರೆ.