ಬೆಂಗಳೂರು, ಏ. 12, ನ್ಯೂಸ್ ಎಕ್ಸ್ ಪ್ರೆಸ್: ಲೋಕಸಭಾ ಚುನಾವಣೆಯಲ್ಲಿ ಬೆಂಗಳೂರಿನ 3 ಕ್ಷೇತ್ರಗಳಲ್ಲೂ ಬಿಜೆಪಿ ಗೆಲ್ಲುವುದು ಎಂದು ಬಿಜೆಪಿ ಹಿರಿಯ ಮುಖಂಡ ಎಸ್.ಎಂ. ಕೃಷ್ಣ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ತೇಜಸ್ವಿ ಸೂರ್ಯ ಪರ ಪ್ರಚಾರದಲ್ಲಿ ಪಾಲ್ಗೊಂಡು ಮಾತನಾಡಿದ ಎಸ್.ಎಂ.ಕೃಷ್ಣ, ತೇಜಸ್ವಿ ಸೂರ್ಯ ಹಿರಿಯ ನಾಯಕರನ್ನು ಒಗ್ಗೂಡಿಸಿಕೊಂಡು ಚುನಾವಣೆ ನಡೆಸುತ್ತಿದ್ದಾರೆ. ಕ್ಷೇತ್ರದಲ್ಲಿ ಈಗಾಗಲೇ ಗೆಲುವಿನ ವಾತಾವರಣ ಸೃಷ್ಟಿಯಾಗಿದೆ. ಮತದಾರರು ಮತ ಚಲಾಯಿಸುವ ಮೂಲಕ ಪ್ರಜಾಪ್ರಭುತ್ವವನ್ನು ಉಳಿಸಬೇಕು ಎಂದು ಕಿವಿ ಮಾತು ಹೇಳಿದರು.
ಯಾತ್ರೆಯಲ್ಲಿ ತೇಜಸ್ವಿ ಸೂರ್ಯ , ಶಾಸಕರಾದ ಆರ್. ಅಶೋಕ್, ವಿ.ಸೋಮಣ್ಣ, ಆರ್. ದೇವೆಗೌಡ, ಉಮೇಶ್ ಶೆಟ್ಟಿ, ಅರುಣ್ ಸೋಮಣ್ಣ, ಮಾಜಿ ಮೇಯರ್ ಶಾಂತಕುಮಾರಿ, ಬುಲೆಟ್ ಪ್ರಕಾಶ್ , ಬಿಬಿಎಂಪಿ ಬಿಜೆಪಿ ಸದಸ್ಯರು ಸೇರಿದಂತೆ ಸ್ಥಳೀಯ ಬಿಜೆಪಿ ಮುಖಂಡರು, ಕಾರ್ಯಕರ್ತರು ಸಾಥ್ ನೀಡಿದರು.