ಬೆಂಗಳೂರು ರೌಡಿ ಹತ್ಯೆ

ಬೆಂಗಳೂರು ರೌಡಿ ಹತ್ಯೆ

ಕೃಷ್ಣಗಿರಿ, ಜೂನ್.10, ನ್ಯೂಸ್ ಎಕ್ಸ್ ಪ್ರೆಸ್: ಬೆಂಗಳೂರು ಮೂಲದ ರೌಡಿಯನ್ನು ತಮಿಳುನಾಡಿನ ಕೃಷ್ಣಗಿರಿ ಜಿಲ್ಲೆಯ ಹೊಸೂರು ಸಮೀಪ ನಾಲ್ವರು ದುಷ್ಕರ್ಮಿಗಳು ಹತ್ಯೆ ಮಾಡಿದ್ದಾರೆ.  ಕೊಲೆ ಆರೋಪಕ್ಕೆ ಸಂಬಂಧಿಸಿ ತಲೆಮರೆಸಿಕೊಂಡಿದ್ದ 38 ವರ್ಷದ ಮಹೇಶ್‌ ಕುಮಾರ್‌ನನ್ನು ನಾಲ್ವರು ದುಷ್ಕರ್ಮಿಗಳು ಕೊಲೆಗೈದಿರುವುದಾಗಿ ಹೊಸೂರು ಪೊಲೀಸರು ತಿಳಿಸಿದ್ದಾರೆ.
ಸೋಮವಾರ ಬೆಳಗ್ಗೆ ತಲೆ ಮರೆಸಿಕೊಂಡು ಓಡಾಡುತ್ತಿದ್ದ ರೌಡಿ ಮಹೇಶ್‌ ಕುಮಾರ್‌ನನ್ನು ಸುತ್ತುವರಿದ ನಾಲ್ವರು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ದಾಳಿ ನಡೆಸಿ ಹತ್ಯೆ ಮಾಡಿದ್ದಾರೆ.  ಹೊಸೂರು ಡಿಎಸ್‌ಪಿ ಮೀನಾಚಿ ಮತ್ತು ಇತರ ಪೊಲೀಸರ್‌ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿದ್ದಾರೆ. ಪ್ರಕರಣವನ್ನು ಹೊಸೂರು ಪೊಲೀಸರು ದಾಖಲಿಸಿದ್ದು, ತನಿಖೆ ನಡೆಸುತ್ತಿದ್ದಾರೆ.

ಫ್ರೆಶ್ ನ್ಯೂಸ್

Latest Posts

Featured Videos