ತುಮಕೂರು, ಮೇ. 30, ನ್ಯೂಸ್ ಎಕ್ಸ್ ಪ್ರೆಸ್: 2019ರ ಲೋಕಸಭಾ ಚುನಾವಣೆಯಲ್ಲಿ ತುಮಕೂರಿನಲ್ಲಿ ಜೆಡಿಎಸ್ ರಾಷ್ಟ್ರಾಧ್ಯಕ್ಷ ದೇವೇಗೌಡ ಅವರನ್ನೇ ಸೋಲಿಸಿರುವ ಜಿ.ಎಸ್.ಬಸವರಾಜು ತಮಗೆ ಸಚಿವ ಸ್ಥಾನ ನೀಡಬೇಕೆಂದು ಒತ್ತಾಯಿಸಿದ್ದಾರೆ.
ಕರ್ನಾಟಕದಿಂದ ಆಯ್ಕೆ ಆಗಿರುವ 25 ಬಿಜೆಪಿ ಸಂಸದರಲ್ಲಿ ಯಾರಿಗೆ ಸಚಿವ ಸ್ಥಾನ ಸಿಗಬಹುದು ಎಂಬ ಲೆಕ್ಕಾಚಾರದಲ್ಲಿರುವಾಗ ನಾನೂ ಕೂಡ ಸಚಿವ ಸ್ಥಾನ ಆಕಾಂಕ್ಷಿ ಎಂದು ತುಮಕೂರು ಸಂಸದ ಜಿ.ಎಸ್.ಬಸವರಾಜು ಹೇಳಿದ್ದಾರೆ.
ಜಿದ್ದಾ-ಜಿದ್ದಿನ ಕ್ಷೇತ್ರವಾಗಿದ್ದ ತುಮಕೂರಿನಲ್ಲಿ ದೇವೇಗೌಡ ಅವರು ಕಾಂಗ್ರೆಸ್ ನ ಬೆಂಬಲದೊಂದಿಗೆ ಸ್ಪರ್ಧಿಸಿದ್ದರು. ಬಿಜೆಪಿ ಇಲ್ಲ ಗೆಲ್ಲುವ ನಿರೀಕ್ಷೆ ಇರಲಿಲ್ಲ ಅಂತಹುದರಲ್ಲಿ ಬಸವರಾಜು ಅವರು ಗೆದ್ದು ದೈತ್ಯ ಸಂಹಾರಿ ಎನಿಸಿಕೊಂಡಿದ್ದಾರೆ.
ದೊಡ್ಡ ವ್ಯಕ್ತಿಯನ್ನು ಸೋಲಿಸಿರುವ ತಮಗೆ ಸಚಿವ ಸ್ಥಾನ ನೀಡಬೇಕು ಎಂಬುದು ಬಸವರಾಜು ಅವರ ಒತ್ತಾಯವಾಗಿದೆ. ಆದರೆ ಖಂಡಿತ ತಮಗೆ ಸಚಿವ ಸ್ಥಾನ ಸಿಗುತ್ತೆ ಎಂಬ ನಂಬಿಕೆ ಇಲ್ಲವೆಂದು ಬಸವರಾಜು ಅವರು ಹೇಳಿದ್ದಾರೆ.